<p><strong>ಸಾಗರ: </strong>ತಾಲ್ಲೂಕಿನ ಕರೂರು ಹೋಬಳಿಯ ಶರಾವತಿ ಹಿನ್ನೀರು ಪ್ರದೇಶವಾದ ನಿಲ್ದೋಡಿ ಬಳಿ ಮೀನು ಹಿಡಿಯಲು ಹೋದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರವಾಗಿ ಖಂಡಿಸಿದ್ದಾರೆ.</p>.<p>ಘಟನೆಯಲ್ಲಿ ಗಾಯಗೊಂಡು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಿರ್ವಾಸೆ ಗ್ರಾಮದ ಮಂಜುನಾಥ್ ಅವರ ಆರೋಗ್ಯ ವಿಚಾರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಮೀನು ಹಿಡಿಯಲು ಹೋದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ನಡೆಸಿರುವುದು ಖಂಡನೀಯ. ಮಂಜುನಾಥ್ ಅವರ ಪಕ್ಕೆಲುಬು ಮುರಿದಿರುವ ಜೊತೆಗೆ ಶ್ವಾಸಕೋಶಕ್ಕೆ ತೊಂದರೆಯಾಗಿದ್ದು, ಉಸಿರಾಟಕ್ಕೂ ಕಷ್ಟಪಡುವಂತಾಗಿದೆ. ಹಲ್ಲೆ ಮಾಡಿದವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹೆದರಿ ಮಂಜುನಾಥ್ ಅವರು ನ್ಯಾಯಾಧೀಶರ ಎದುರು ತಮ್ಮನ್ನು ಹಾಜರುಪಡಿಸಿದಾಗ ಅವರ ವಿರುದ್ಧ ಯಾವುದೇ ದೂರು ಹೇಳಿಲ್ಲ. ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯವರ ದೌರ್ಜನ್ಯ ಮಿತಿಮೀರುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ದೂರಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಬಿಜೆಪಿ ಮುಖಂಡ ಟಿ.ಡಿ.ಮೇಘರಾಜ್, ಪ್ರಮುಖರಾದ ಜಿ.ಟಿ.ಸತ್ಯನಾರಾಯಣ, ಕೆ.ಹೊಳಿಯಪ್ಪ, ಹರೀಶ್ ಗಂಟೆ, ಗಣೇಶ್ ಜಾಕಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ತಾಲ್ಲೂಕಿನ ಕರೂರು ಹೋಬಳಿಯ ಶರಾವತಿ ಹಿನ್ನೀರು ಪ್ರದೇಶವಾದ ನಿಲ್ದೋಡಿ ಬಳಿ ಮೀನು ಹಿಡಿಯಲು ಹೋದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರವಾಗಿ ಖಂಡಿಸಿದ್ದಾರೆ.</p>.<p>ಘಟನೆಯಲ್ಲಿ ಗಾಯಗೊಂಡು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಿರ್ವಾಸೆ ಗ್ರಾಮದ ಮಂಜುನಾಥ್ ಅವರ ಆರೋಗ್ಯ ವಿಚಾರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಮೀನು ಹಿಡಿಯಲು ಹೋದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ನಡೆಸಿರುವುದು ಖಂಡನೀಯ. ಮಂಜುನಾಥ್ ಅವರ ಪಕ್ಕೆಲುಬು ಮುರಿದಿರುವ ಜೊತೆಗೆ ಶ್ವಾಸಕೋಶಕ್ಕೆ ತೊಂದರೆಯಾಗಿದ್ದು, ಉಸಿರಾಟಕ್ಕೂ ಕಷ್ಟಪಡುವಂತಾಗಿದೆ. ಹಲ್ಲೆ ಮಾಡಿದವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹೆದರಿ ಮಂಜುನಾಥ್ ಅವರು ನ್ಯಾಯಾಧೀಶರ ಎದುರು ತಮ್ಮನ್ನು ಹಾಜರುಪಡಿಸಿದಾಗ ಅವರ ವಿರುದ್ಧ ಯಾವುದೇ ದೂರು ಹೇಳಿಲ್ಲ. ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯವರ ದೌರ್ಜನ್ಯ ಮಿತಿಮೀರುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ದೂರಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಬಿಜೆಪಿ ಮುಖಂಡ ಟಿ.ಡಿ.ಮೇಘರಾಜ್, ಪ್ರಮುಖರಾದ ಜಿ.ಟಿ.ಸತ್ಯನಾರಾಯಣ, ಕೆ.ಹೊಳಿಯಪ್ಪ, ಹರೀಶ್ ಗಂಟೆ, ಗಣೇಶ್ ಜಾಕಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>