ಸೊರಬ: ತಾಲ್ಲೂಕಿನ ನಿಸರಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾಸನೂರು ಅರಣ್ಯ ಪ್ರದೇಶದ ನಂದಿ ಗ್ರಾಮದ ಬಳಿ ಗಾಯಗೊಂಡು ನಿತ್ರಾಣಗೊಂಡಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು ಚಿಕಿತ್ಸೆ ನೀಡಿದರು.
ಶನಿವಾರ ಬೆಳಿಗ್ಗೆ ಅರಣ್ಯ ಪ್ರದೇಶದಿಂದ ನಂದಿ ಗ್ರಾಮದ ಬಳಿ ಗಾಯಗೊಂಡು ಓಡಾಡುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ಅರಣ್ಯಾಧಿಕಾರಿಗಳು ಚಿಕಿತ್ಸೆ ನೀಡಿದರು.
ಜಿಂಕೆ ಮರಿ ಗುಣಮುಖವಾಗುವವರೆಗೂ ಚಿಕಿತ್ಸೆ ನೀಡಲಾಗುವುದು. ಚೇತರಿಸಿಕೊಂಡ ನಂತರ ಅರಣ್ಯಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಜಾವೇದ್ ಬಾಷಾ ಅಂಗಡಿ ತಿಳಿಸಿದರು.
ಉಪ ವಲಯ ಅರಣ್ಯಾಧಿಕಾರಿ ಪರಶುರಾಮ್, ಸಿಬ್ಬಂದಿ ಅಶೋಕ್, ಕೆರೆಸ್ವಾಮಿ, ಆನಂದ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.