ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ನೀಡಿದ ನಿರ್ದೇಶನಗಳನ್ನು ಪಾಲಿಸದೆ ಅರ್ಜಿಗಳನ್ನು ತಿರಸ್ಕರಿಸಿರುವುದು ಸರಿಯಾದ ಕ್ರಮವಲ್ಲ. ಹೀಗೆ ತಿರಸ್ಕರಿಸಲಾದ ಅರ್ಜಿಗಳ ಪುನರ್ ಪರಿಶೀಲನೆ ಮಾಡಬೇಕು.ಅರ್ಜಿಗಳ ಪುನರ್ ಪರಿಶೀಲನೆ ಮಾಡುವಾಗ ಸರ್ಕಾರ ಸೂಚಿಸಿರುವ 13 ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಈ ಬಗ್ಗೆ ಗ್ರಾಮ ಅರಣ್ಯ ಹಕ್ಕು ಸಮಿತಿ ಸದಸ್ಯರಿಗೆ ಸರಿಯಾದ ರೀತಿಯಲ್ಲಿ ಮನವರಿಕೆ ಮಾಡಬೇಕು ಎಂದು ಕಾಗೋಡು ತಿಮ್ಮಪ್ಪಒತ್ತಾಯಿಸಿದರು.