ಸೊರಬ:ತಾಲ್ಲೂಕಿನ ಹಿರೇಕಸವಿ ಗ್ರಾಮದಲ್ಲಿ ಯುವ ರೈತರೊಬ್ಬರುಸಾಲದ ಹೊರೆಯಿಂದಾಗಿ ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ.
ಅಕಾಲಿಕ ಮಳೆಯಿಂದಾಗಿ 2 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ ₹ 80 ಸಾವಿರ ಹಾಗೂ ಕೈಗಡವಾಗಿ ₹ 2 ಲಕ್ಷ ಸಾಲ ಮಾಡಿಕೊಂಡಿದ್ದರು. ಬೆಳೆ ನಷ್ಟದಿಂದ ಸಾಲ ತೀರಿಸಲಾಗದೇ ತಮ್ಮ ಕೃಷಿ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಹೇಶ್ ಅವರಿಗೆ ತಕ್ಷಣವೇ ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.