ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಗಳ್ಳತನ: ಆರೋಪಿ ಬಂಧನ

Last Updated 4 ಜುಲೈ 2021, 6:58 IST
ಅಕ್ಷರ ಗಾತ್ರ

ಸೊರಬ: ತಾಲ್ಲೂಕಿನ ಛತ್ರದಹಳ್ಳಿ ಗ್ರಾಮದ ರಮೇಶ ಎಂಬುವರ ಮನೆಯಲ್ಲಿ ಬಂಗಾರ ಕಳವು ಮಾಡಿದ್ದ ಆರೋಪಿ ಚಂದ್ರಪ್ಪ ಅವರನ್ನು ಪಿಎಸ್‌ಐ ಪ್ರಶಾಂತಕುಮಾರ್ ನೇತೃತ್ವದಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಆರೋಪಿ ಸೆರೆಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸರು ಆರೋಪಿಯಿಂದ ₹ 96 ಸಾವಿರ ಮೌಲ್ಯದ 25 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಜೂನ್ 29ರಂದು ಛತ್ರದಹಳ್ಳಿ ಗ್ರಾಮದ ಆರೋಪಿ ಚಂದ್ರಪ್ಪ ಅದೇ ಗ್ರಾಮದ ರಮೇಶ ಎಂಬುವರ ಮನೆಯಲ್ಲಿ ಉಂಗುರ, ಕಿವಿ ಆಭರಣ ಹಾಗೂ ಸರ ಸೇರಿ ಒಟ್ಟು 25 ಗ್ರಾಂ ಚಿನ್ನವನ್ನು ಕಳವು ಮಾಡಿದ್ದ.

ಪಿಎಸ್‌ಐ ಪ್ರಶಾಂತಕುಮಾರ್, ಅಪರಾಧ ವಿಭಾಗದ ಸಲ್ಮಾನ್ ಖಾನ್ ಹಾಜಿ, ಸಿದ್ದನಗೌಡ, ಶಶಿಧರ, ಜಗದೀಶ್, ಸಂದೀಪ, ಸುಧಾಕರ್, ಪರಮೇಶ್ವರ ನಾಯಕ್ ತಂಡ ಆರೋಪಿಯನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT