2018ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾದರೂ, ಪೂರ್ಣ ಬಹುಮತ ಇರಲಿಲ್ಲ. ಮುಂದಿನ ಚುನಾವಣೆಯಲ್ಲಿ ಇಂತಹ ಸಮಸ್ಯೆ ಎದುರಾಗಬಾರದು. ಬಿಜೆಪಿ ಉತ್ತಮ ಸಾಧನೆ ಮಾಡಬೇಕೆಂದರೆ ಯತ್ನಾಳ್ ಸೇರಿದಂತೆ ಎಲ್ಲರೂ ಬಾಯಿಮುಚ್ಚಿಕೊಂಡು ಕೆಲಸ ಮಾಡಬೇಕು. ಕೇಂದ್ರ ನಾಯಕರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ತಮ್ಮನ್ನು ಭೇಟಿ ಮಾಡಿದ ಮಠಾಧೀಶರಿಗೂ ಯಡಿಯೂರಪ್ಪ ಅವರು ಅದನ್ನೇ ಹೇಳಿದ್ದಾರೆ. ಉಳಿದ ಮುಖಂಡರೂ ಸಂಯಮ ಪಾಲಿಸಬೇಕು ಎಂದು ತಾಕೀತು ಮಾಡಿದರು.