ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ಣ ಬಹುಮತವೇ ಗೊಂದಲಗಳಿಗೆ ಪರಿಹಾರ: ಸಚಿವ ಕೆ.ಎಸ್.ಈಶ್ವರಪ್ಪ

Last Updated 21 ಜುಲೈ 2021, 12:25 IST
ಅಕ್ಷರ ಗಾತ್ರ

ಶಿವಮೊಗ್ಗ: ಬಿಜೆಪಿ ರಾಜ್ಯದಲ್ಲಿ ಪೂರ್ಣ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವವರೆಗೂ ಇಂತಹ ಗೊಂದಲಗಳು ಸಹಜ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

2018ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾದರೂ, ಪೂರ್ಣ ಬಹುಮತ ಇರಲಿಲ್ಲ. ಮುಂದಿನ ಚುನಾವಣೆಯಲ್ಲಿ ಇಂತಹ ಸಮಸ್ಯೆ ಎದುರಾಗಬಾರದು. ಬಿಜೆಪಿ ಉತ್ತಮ ಸಾಧನೆ ಮಾಡಬೇಕೆಂದರೆ ಯತ್ನಾಳ್‌ ಸೇರಿದಂತೆ ಎಲ್ಲರೂ ಬಾಯಿಮುಚ್ಚಿಕೊಂಡು ಕೆಲಸ ಮಾಡಬೇಕು. ಕೇಂದ್ರ ನಾಯಕರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ತಮ್ಮನ್ನು ಭೇಟಿ ಮಾಡಿದ ಮಠಾಧೀಶರಿಗೂ ಯಡಿಯೂರಪ್ಪ ಅವರು ಅದನ್ನೇ ಹೇಳಿದ್ದಾರೆ. ಉಳಿದ ಮುಖಂಡರೂ ಸಂಯಮ ಪಾಲಿಸಬೇಕು ಎಂದು ತಾಕೀತು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT