<p><strong>ಶಿವಮೊಗ್ಗ</strong>: ಮಕ್ಕಳ ಕ್ಷೇಮಾಭಿವೃದ್ಧಿಗಾಗಿ ಹೆಚ್ಚಿನ ಕಾಲೇಜು ಕೊಠಡಿ ನಿರ್ಮಾಣಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವುದಾಗಿ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಸಹ್ಯಾದ್ರಿ ವಾಣಿಜ್ಯ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಸಾಂಸ್ಕೃತಿಕ, ಕ್ರೀಡಾ, ಎನ್ಸಿಸಿ, ಎನ್ಎಸ್ಎಸ್, ಯುವ ರೆಡ್ ಕ್ರಾಸ್, ರೋವರ್ಸ್- ರೇಂಜರ್ಸ್ ಸಮಾರಂಭ ಉದ್ಘಾಟಿಸಿ ಅವರು<br />ಮಾತನಾಡಿದರು.</p>.<p>‘ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಮಕ್ಕಳು ಒತ್ತಡದ ಸ್ಥಿತಿಯಲ್ಲಿ ವಿದ್ಯೆ ಕಲಿಯುವುದು ಬೇಡ. ಶೀಘ್ರದಲ್ಲಿ ಕಾಲೇಜು ಕೊಠಡಿ ನಿರ್ಮಾಣಕ್ಕೆ ಸರ್ಕಾರದ ಜೊತೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದರು.</p>.<p>‘ಕನ್ನಡ ನಮ್ಮ ಅಂತರಂಗದ ಭಾಷೆ ಆಗಬೇಕು. ಸಾಧ್ಯವಾದಷ್ಟು ಕನ್ನಡ ಬಳಸೋಣ. ಸರ್ಕಾರಿ ಕೆಲಸವೇ ಬೇಕು ಎಂದು ಓದಬೇಡಿ. ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕುತ್ತೇವೆ. ಸುಂದರ ಬದುಕು ಕಟ್ಟಿಕೊಳ್ಳುತ್ತೇವೆ ಎಂಬ ಆತ್ಮ ವಿಶ್ವಾಸ ಇರಲಿ’ ಎಂದು ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಹೇಳಿದರು.</p>.<p>ಹಿರಿಯ ವಿದ್ಯಾರ್ಥಿ, ಕ್ರೀಡಾಪಟು ಮಂಜುನಾಥ ಎಚ್. ಮಾತನಾಡಿ, ‘ಹತ್ತು ವರ್ಷಗಳ ಹಿಂದೆ ನಾನೂ ಕೂಡ ಹಿಂದಿನ ಸಾಲಿನಲ್ಲಿ ಕೂರುತ್ತಿದ್ದೆ. ಗುರುಗಳ ಮಾರ್ಗದರ್ಶನ ಪಡೆದು ಕ್ರೀಡೆಯಲ್ಲಿ ಯಶಸ್ವಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ’ ಎಂದರು.</p>.<p>‘ಸರ್ಕಾರದಿಂದ ಕ್ರೀಡೆಗೆ ಸಹಕಾರ ಖಂಡಿತ ಇದೆ. ಆದರೆ ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡೆದುಕೊಳ್ಳುವುದರಲ್ಲಿ ಎಡುವು ತ್ತಿದ್ದಾರೆ’ ಎಂದರು.</p>.<p>ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ನವೀನ್ ಕುಮಾರ್ ಎಸ್.ಕೆ, ಪ್ರಾಂಶುಪಾಲರಾದ ಪ್ರೊ. ಎಂ.ಕೆ ವೀಣಾ, ಪ್ರೊ. ಕೆ.ಬಿ ಧನಂಜಯ,<br />ಪ್ರೊ. ರಾಜೇಶ್ವರಿ ಎನ್, ಕ್ರೀಡಾ ಸಂಚಾಲಕ ಪ್ರೊ.ಕುಂದನ್ ಬಸವರಾಜ್, ಸಾಂಸ್ಕೃತಿಕ ಸಂಚಾಲಕ ಗಿರಿಧರ್ ಕೆ.ವಿ, ಐಕ್ಯೂಎಸಿ ಸಂಚಾಲಕಿ ಪ್ರೊ.ಕೆ.ಎಸ್. ಸರಳ, ಶಿವಮೂರ್ತಿ ಎ., ಶುಭ ಮರವಂತೆ, ಶಶಿಧರ್ ಯು.<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಮಕ್ಕಳ ಕ್ಷೇಮಾಭಿವೃದ್ಧಿಗಾಗಿ ಹೆಚ್ಚಿನ ಕಾಲೇಜು ಕೊಠಡಿ ನಿರ್ಮಾಣಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವುದಾಗಿ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಸಹ್ಯಾದ್ರಿ ವಾಣಿಜ್ಯ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಸಾಂಸ್ಕೃತಿಕ, ಕ್ರೀಡಾ, ಎನ್ಸಿಸಿ, ಎನ್ಎಸ್ಎಸ್, ಯುವ ರೆಡ್ ಕ್ರಾಸ್, ರೋವರ್ಸ್- ರೇಂಜರ್ಸ್ ಸಮಾರಂಭ ಉದ್ಘಾಟಿಸಿ ಅವರು<br />ಮಾತನಾಡಿದರು.</p>.<p>‘ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಮಕ್ಕಳು ಒತ್ತಡದ ಸ್ಥಿತಿಯಲ್ಲಿ ವಿದ್ಯೆ ಕಲಿಯುವುದು ಬೇಡ. ಶೀಘ್ರದಲ್ಲಿ ಕಾಲೇಜು ಕೊಠಡಿ ನಿರ್ಮಾಣಕ್ಕೆ ಸರ್ಕಾರದ ಜೊತೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದರು.</p>.<p>‘ಕನ್ನಡ ನಮ್ಮ ಅಂತರಂಗದ ಭಾಷೆ ಆಗಬೇಕು. ಸಾಧ್ಯವಾದಷ್ಟು ಕನ್ನಡ ಬಳಸೋಣ. ಸರ್ಕಾರಿ ಕೆಲಸವೇ ಬೇಕು ಎಂದು ಓದಬೇಡಿ. ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕುತ್ತೇವೆ. ಸುಂದರ ಬದುಕು ಕಟ್ಟಿಕೊಳ್ಳುತ್ತೇವೆ ಎಂಬ ಆತ್ಮ ವಿಶ್ವಾಸ ಇರಲಿ’ ಎಂದು ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಹೇಳಿದರು.</p>.<p>ಹಿರಿಯ ವಿದ್ಯಾರ್ಥಿ, ಕ್ರೀಡಾಪಟು ಮಂಜುನಾಥ ಎಚ್. ಮಾತನಾಡಿ, ‘ಹತ್ತು ವರ್ಷಗಳ ಹಿಂದೆ ನಾನೂ ಕೂಡ ಹಿಂದಿನ ಸಾಲಿನಲ್ಲಿ ಕೂರುತ್ತಿದ್ದೆ. ಗುರುಗಳ ಮಾರ್ಗದರ್ಶನ ಪಡೆದು ಕ್ರೀಡೆಯಲ್ಲಿ ಯಶಸ್ವಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ’ ಎಂದರು.</p>.<p>‘ಸರ್ಕಾರದಿಂದ ಕ್ರೀಡೆಗೆ ಸಹಕಾರ ಖಂಡಿತ ಇದೆ. ಆದರೆ ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡೆದುಕೊಳ್ಳುವುದರಲ್ಲಿ ಎಡುವು ತ್ತಿದ್ದಾರೆ’ ಎಂದರು.</p>.<p>ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ನವೀನ್ ಕುಮಾರ್ ಎಸ್.ಕೆ, ಪ್ರಾಂಶುಪಾಲರಾದ ಪ್ರೊ. ಎಂ.ಕೆ ವೀಣಾ, ಪ್ರೊ. ಕೆ.ಬಿ ಧನಂಜಯ,<br />ಪ್ರೊ. ರಾಜೇಶ್ವರಿ ಎನ್, ಕ್ರೀಡಾ ಸಂಚಾಲಕ ಪ್ರೊ.ಕುಂದನ್ ಬಸವರಾಜ್, ಸಾಂಸ್ಕೃತಿಕ ಸಂಚಾಲಕ ಗಿರಿಧರ್ ಕೆ.ವಿ, ಐಕ್ಯೂಎಸಿ ಸಂಚಾಲಕಿ ಪ್ರೊ.ಕೆ.ಎಸ್. ಸರಳ, ಶಿವಮೂರ್ತಿ ಎ., ಶುಭ ಮರವಂತೆ, ಶಶಿಧರ್ ಯು.<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>