ಗಮಕ ವ್ಯಾಖ್ಯಾನಕಾರ ಡಾ.ಎ.ವಿ.ಪ್ರಸನ್ನ ಮಾತನಾಡಿ, ಕವಿಯ ಬಗ್ಗೆ ಅಧ್ಯಯನ ಮಾಡುವ ಮೊದಲು ಆತನ ಬಗ್ಗೆ ವಿಶೇಷ ಪ್ರೀತಿ, ಗೌರವ, ಆಶ್ಚರ್ಯ ಇರಬೇಕು. ಕವಿಯನ್ನು ಬೇರೆ ದೃಷ್ಟಿಯಿಂದ ನೋಡಿದಾಗ ಆತನ ಕಾವ್ಯ ಸಂಪೂರ್ಣ ತೆರೆದುಕೊಳ್ಳಲು ಸಾಧ್ಯವಿಲ್ಲ. ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳನ್ನೂ ಸಂಸ್ಕೃತಿಗೆ ತಕ್ಕಂತೆ ಬದಲಾಯಿಸುವುದು ತಪ್ಪಲ್ಲ. ಆದರೆ, ಕುಕವಿಗಳು ಮನಸ್ಸಿಗೆ ಬಂದಂತೆ ಮಹಾಕಾವ್ಯ ತಿರುಚುತ್ತಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಳವಳ ವ್ಯಕ್ತಪಡಿಸಿದರು.