<p><strong>ಸಾಗರ: </strong>ನಗರದ ಹೃದಯ ಭಾಗದಲ್ಲಿರುವ ಗಣಪತಿ ಕೆರೆಯ ಸರ್ವೆ ಕಾರ್ಯವನ್ನು ಭೂಮಾಪನಾ ಇಲಾಖೆ ನಡೆಸಿದ್ದು, ವರದಿ ಶೀಘ್ರ ಲಭ್ಯವಾಗಲಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.</p>.<p>ಇಲ್ಲಿನ ಮೀನುಗಾರಿಕೆ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗಣಪತಿ ಕೆರೆಯಲ್ಲಿ ಮೀನಿನ ಮರಿಗಳ ಬಿತ್ತನೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಗಣಪತಿ ಕೆರೆಯ ವಿಸ್ತೀರ್ಣದ ಕುರಿತು ನ.11ರಂದು ವರದಿ ಸಲ್ಲಿಸುವಂತೆ ರಾಜ್ಯದ ಹೈಕೋರ್ಟ್ ನಿರ್ದೇಶನ ನೀಡಿದ್ದು, ಆ ಪ್ರಕಾರ ಅಧಿಕಾರಿಗಳು ಅಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನ ಪ್ರದೇಶವಾದ ಹಸಿರುಮಕ್ಕಿ, ಗಣಪತಿ ಕೆರೆ ಸೇರಿ ವಿವಿಧೆಡೆ ಒಟ್ಟು 4 ಲಕ್ಷ ಮೀನಿನ ಮರಿಗಳನ್ನು ಬಿತ್ತನೆ ಮಾಡಲು ಮೀನುಗಾರಿಕೆ ಇಲಾಖೆ ಮುಂದಾಗಿದೆ. ಈ ಬಾರಿ ಗಣಪತಿ ಕೆರೆಗೆ 20 ಸಾವಿರ ಮೀನಿನ ಮರಿ ಬಿಡಲಾಗಿದೆ ಎಂದರು.</p>.<p>ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಪೌರಾಯುಕ್ತ ಎಚ್.ಕೆ. ನಾಗಪ್ಪ, ಸದಸ್ಯರಾದ ಟಿ.ಡಿ. ಮೇಘರಾಜ್, ಕೆ.ಆರ್. ಗಣೇಶ್ ಪ್ರಸಾದ್,ಇಲಾಖೆ ಅಧಿಕಾರಿಗಳಾದ ಸತೀಶ್, ರೇವತಿ, ಪ್ರಶಾಂತ್ ವರ್ಣೇಕರ್, ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಹಂಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ನಗರದ ಹೃದಯ ಭಾಗದಲ್ಲಿರುವ ಗಣಪತಿ ಕೆರೆಯ ಸರ್ವೆ ಕಾರ್ಯವನ್ನು ಭೂಮಾಪನಾ ಇಲಾಖೆ ನಡೆಸಿದ್ದು, ವರದಿ ಶೀಘ್ರ ಲಭ್ಯವಾಗಲಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.</p>.<p>ಇಲ್ಲಿನ ಮೀನುಗಾರಿಕೆ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗಣಪತಿ ಕೆರೆಯಲ್ಲಿ ಮೀನಿನ ಮರಿಗಳ ಬಿತ್ತನೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಗಣಪತಿ ಕೆರೆಯ ವಿಸ್ತೀರ್ಣದ ಕುರಿತು ನ.11ರಂದು ವರದಿ ಸಲ್ಲಿಸುವಂತೆ ರಾಜ್ಯದ ಹೈಕೋರ್ಟ್ ನಿರ್ದೇಶನ ನೀಡಿದ್ದು, ಆ ಪ್ರಕಾರ ಅಧಿಕಾರಿಗಳು ಅಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನ ಪ್ರದೇಶವಾದ ಹಸಿರುಮಕ್ಕಿ, ಗಣಪತಿ ಕೆರೆ ಸೇರಿ ವಿವಿಧೆಡೆ ಒಟ್ಟು 4 ಲಕ್ಷ ಮೀನಿನ ಮರಿಗಳನ್ನು ಬಿತ್ತನೆ ಮಾಡಲು ಮೀನುಗಾರಿಕೆ ಇಲಾಖೆ ಮುಂದಾಗಿದೆ. ಈ ಬಾರಿ ಗಣಪತಿ ಕೆರೆಗೆ 20 ಸಾವಿರ ಮೀನಿನ ಮರಿ ಬಿಡಲಾಗಿದೆ ಎಂದರು.</p>.<p>ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಪೌರಾಯುಕ್ತ ಎಚ್.ಕೆ. ನಾಗಪ್ಪ, ಸದಸ್ಯರಾದ ಟಿ.ಡಿ. ಮೇಘರಾಜ್, ಕೆ.ಆರ್. ಗಣೇಶ್ ಪ್ರಸಾದ್,ಇಲಾಖೆ ಅಧಿಕಾರಿಗಳಾದ ಸತೀಶ್, ರೇವತಿ, ಪ್ರಶಾಂತ್ ವರ್ಣೇಕರ್, ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಹಂಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>