<p><strong>ಶಿವಮೊಗ್ಗ</strong>: ನಗರದ ಪ್ರಮುಖ ಹಸಿರು ತಾಣವಾದ ಗಾಂಧಿ ಪಾರ್ಕ್ನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, ಒಂದು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. </p>.<p>ಹರಾಜು ಪ್ರಕ್ರಿಯೆ ನಡೆಸಿದ ಸಂದರ್ಭದಲ್ಲಿ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ ಇನ್ನು ಮುಂದೆ ನಗರಸಭೆಯೇ ನಿರ್ವಹಣೆ ಕೈಗೊಳ್ಳಲಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>‘ಈಗಾಗಲೇ ಆಟದ ಉಪಕರಣಗಳನ್ನು ದುರಸ್ತಿಗೊಳಿಸಲಾಗಿದೆ. ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಲಾಗಿದೆ. ಹಸಿರೀಕರಣಕ್ಕಾಗಿ ತುಂತುರು ನೀರಾವರಿ ವ್ಯವಸ್ಥೆ ಮಾಡಲಾಗಿದೆ. ಸಸಿಗಳಿಗೆ ನಿಯಮಿತವಾಗಿ ನೀರು ಒದಗಿಸಲಾಗುತ್ತಿದೆ. ಒಳಚರಂಡಿ ನೀರಿನಿಂದ ದುರ್ವಾಸನೆ ಬಾರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು. </p>.<p>‘ಪಾರ್ಕ್ನಲ್ಲಿ ವನ್ಯಜೀವಿ ಮಾಹಿತಿ ಹಾಗೂ ವಿವರಣೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಮಕ್ಕಳಲ್ಲಿ ಪರಿಸರ ಮತ್ತು ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕೇಂದ್ರವನ್ನು ರೂಪಿಸಲಾಗಿದೆ’ ಎಂದರು. </p>.<p>ಕಾಮಗಾರಿಗಳ ಮೇಲ್ವಿಚಾರಣೆಗೆ ಉಪ ಆಯುಕ್ತರು ಮತ್ತು ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು. </p>.<p>‘ಉಚಿತ ಪ್ರವೇಶ ನೀಡಿದರೆ ಹಾನಿ ಮಾಡುವ ಪ್ರಮಾಣ ಹೆಚ್ಚಾಗುತ್ತದೆ. ಆದ್ದರಿಂದ ಕಡಿಮೆ ಶುಲ್ಕದ ಮೂಲಕ ಸಂರಕ್ಷಣೆಗೆ ಮಹತ್ವ ನೀಡಲಾಗಿದೆ. ವಯಸ್ಕರಿಗೆ ₹ 10, ಮಕ್ಕಳಿಗೆ ₹ 5 ನಿಗದಿಪಡಿಸಲಾಗಿದೆ’ ಎಂದರು. </p>.<p>ಉಪಆಯುಕ್ತ ತುಷಾರ್, ಕಾರ್ಯಪಾಲಕ ಎಂಜಿನಿಯರ್ ಲಕ್ಷ್ಮೀ ಪ್ರಿಯಾ, ಜ್ಯೋತಿ ಉಪಸ್ಥಿತಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ನಗರದ ಪ್ರಮುಖ ಹಸಿರು ತಾಣವಾದ ಗಾಂಧಿ ಪಾರ್ಕ್ನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, ಒಂದು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. </p>.<p>ಹರಾಜು ಪ್ರಕ್ರಿಯೆ ನಡೆಸಿದ ಸಂದರ್ಭದಲ್ಲಿ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ ಇನ್ನು ಮುಂದೆ ನಗರಸಭೆಯೇ ನಿರ್ವಹಣೆ ಕೈಗೊಳ್ಳಲಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p>.<p>‘ಈಗಾಗಲೇ ಆಟದ ಉಪಕರಣಗಳನ್ನು ದುರಸ್ತಿಗೊಳಿಸಲಾಗಿದೆ. ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಲಾಗಿದೆ. ಹಸಿರೀಕರಣಕ್ಕಾಗಿ ತುಂತುರು ನೀರಾವರಿ ವ್ಯವಸ್ಥೆ ಮಾಡಲಾಗಿದೆ. ಸಸಿಗಳಿಗೆ ನಿಯಮಿತವಾಗಿ ನೀರು ಒದಗಿಸಲಾಗುತ್ತಿದೆ. ಒಳಚರಂಡಿ ನೀರಿನಿಂದ ದುರ್ವಾಸನೆ ಬಾರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು. </p>.<p>‘ಪಾರ್ಕ್ನಲ್ಲಿ ವನ್ಯಜೀವಿ ಮಾಹಿತಿ ಹಾಗೂ ವಿವರಣೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಮಕ್ಕಳಲ್ಲಿ ಪರಿಸರ ಮತ್ತು ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕೇಂದ್ರವನ್ನು ರೂಪಿಸಲಾಗಿದೆ’ ಎಂದರು. </p>.<p>ಕಾಮಗಾರಿಗಳ ಮೇಲ್ವಿಚಾರಣೆಗೆ ಉಪ ಆಯುಕ್ತರು ಮತ್ತು ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು. </p>.<p>‘ಉಚಿತ ಪ್ರವೇಶ ನೀಡಿದರೆ ಹಾನಿ ಮಾಡುವ ಪ್ರಮಾಣ ಹೆಚ್ಚಾಗುತ್ತದೆ. ಆದ್ದರಿಂದ ಕಡಿಮೆ ಶುಲ್ಕದ ಮೂಲಕ ಸಂರಕ್ಷಣೆಗೆ ಮಹತ್ವ ನೀಡಲಾಗಿದೆ. ವಯಸ್ಕರಿಗೆ ₹ 10, ಮಕ್ಕಳಿಗೆ ₹ 5 ನಿಗದಿಪಡಿಸಲಾಗಿದೆ’ ಎಂದರು. </p>.<p>ಉಪಆಯುಕ್ತ ತುಷಾರ್, ಕಾರ್ಯಪಾಲಕ ಎಂಜಿನಿಯರ್ ಲಕ್ಷ್ಮೀ ಪ್ರಿಯಾ, ಜ್ಯೋತಿ ಉಪಸ್ಥಿತಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>