<p><strong>ತ್ಯಾಗರ್ತಿ</strong>: ಸರ್ವಧರ್ಮಿಯರನ್ನು ಹೊಂದಿರುವ ತ್ಯಾಗರ್ತಿ ಗ್ರಾಮ ಸುಮಾರು 5,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಸಂಘಟಿಸಿ ಮಾದರಿಯಾಗಿದೆ.</p>.<p>ಕೆಲವು ವರ್ಷಗಳ ಹಿಂದೆ ಗ್ರಾಮದಲ್ಲಿ ಅಂಬೇಡ್ಕರ್ ಸಂಘ, ಮುಕ್ಕುಪ್ಪೆ ಸರ್ಕಲ್, ಕಾಗೋಡು ತಿಮ್ಮಪ್ಪ ವೃತ್ತ, ಬನ್ನಿಕಟ್ಟೆ, ಮಾರಿಕಾಂಬಾ ತವರು ಮನೆ ಹಾಗೂ ಮಾರಿಕಾಂಬಾ ದೇವಸ್ಥಾನ ಹೀಗೆ ಬೇರೆ ಬೇರೆ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿತ್ತು.</p>.<p>ಗ್ರಾಮದ ಹಿರಿಯರು, ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಚರ್ಚಿಸಿ ಎಲ್ಲರೂ ಸೇರಿ ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪಿಸಬೇಕು ಎಂದು ತೀರ್ಮಾನ ಕೈಗೊಂಡರು. ಅದರಂತೆ ಐದಾರು ವರ್ಷಗಳಿಂದ ಸಾರ್ವಜನಿಕವಾಗಿ ಒಂದೇ ಕಡೆ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ.</p>.<p>ನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೋವಿಡ್ ಕಾರಣದಿಂದ ಎರಡು ವರ್ಷ ಈ ಸಂಭ್ರಮಕ್ಕೆ ತಡೆ ಉಂಟಾಗಿತ್ತು. ಸೆಪ್ಟೆಂಬರ್ 7ರಂದು ಗಣಪತಿ ಮೆರವಣಿಗೆ ಹಾಗೂ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಸರ್ವಧರ್ಮಿಯರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ವಿಶೇಷ.</p>.<p>ಅಂದು ಜನಪದ ಕಲಾತಂಡಗಳಿಂದ ವಿವಿಧ ವೇಷಭೂಷಣಗಳ ಪ್ರದರ್ಶನದೊಂದಿಗೆ ಗ್ರಾಮದ ಪ್ರತಿ ಬೀದಿಗಳಲ್ಲೂ ಮೆರವಣಿಗೆ ನಡೆಯಲಿದೆ. ಸಿಡಿಮದ್ದು ಪ್ರದರ್ಶನದೊಂದಿಗೆ ತ್ಯಾಗರ್ತಿಯ ಅಗಸರ ಹೊಳೆಯಲ್ಲಿ ಗಣಪತಿ ವಿಸರ್ಜನೆ ನಡೆಯಲಿದೆ.</p>.<p>***</p>.<p>ಗ್ರಾಮದ ಪ್ರತಿಯೊಬ್ಬರೂ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಪ್ರತಿ ವರ್ಷವೂ ಇದೇ ರೀತಿಯ ಸಹಕಾರ ನಿರೀಕ್ಷಿಸುತ್ತೇವೆ.<br />-<em><strong>ರಾಘವೇಂದ್ರ, ಅಧ್ಯಕ್ಷ, ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ, ತ್ಯಾಗರ್ತಿ</strong></em></p>.<p>***</p>.<p>ಗ್ರಾಮದ ಜನರೆಲ್ಲರೂ ಸೇರಿ ಗಣಪತಿ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷದ ಸಂಗತಿ. ಮುಂದೆಯೂ ಇದೇ ರೀತಿ ಶಾಂತ ರೀತಿಯಿಂದ ನಡೆಸಿ ಗ್ರಾಮದ ಯಶಸ್ಸಿಗೆ ಕೈ ಜೋಡಿಸಿ.<br />-<em><strong>ಇಸಾಕ್, ಉಪಾಧ್ಯಕ್ಷ, ತ್ಯಾಗರ್ತಿ ಗ್ರಾಮ ಪಂಚಾಯಿತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾಗರ್ತಿ</strong>: ಸರ್ವಧರ್ಮಿಯರನ್ನು ಹೊಂದಿರುವ ತ್ಯಾಗರ್ತಿ ಗ್ರಾಮ ಸುಮಾರು 5,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಸಂಘಟಿಸಿ ಮಾದರಿಯಾಗಿದೆ.</p>.<p>ಕೆಲವು ವರ್ಷಗಳ ಹಿಂದೆ ಗ್ರಾಮದಲ್ಲಿ ಅಂಬೇಡ್ಕರ್ ಸಂಘ, ಮುಕ್ಕುಪ್ಪೆ ಸರ್ಕಲ್, ಕಾಗೋಡು ತಿಮ್ಮಪ್ಪ ವೃತ್ತ, ಬನ್ನಿಕಟ್ಟೆ, ಮಾರಿಕಾಂಬಾ ತವರು ಮನೆ ಹಾಗೂ ಮಾರಿಕಾಂಬಾ ದೇವಸ್ಥಾನ ಹೀಗೆ ಬೇರೆ ಬೇರೆ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿತ್ತು.</p>.<p>ಗ್ರಾಮದ ಹಿರಿಯರು, ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಚರ್ಚಿಸಿ ಎಲ್ಲರೂ ಸೇರಿ ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪಿಸಬೇಕು ಎಂದು ತೀರ್ಮಾನ ಕೈಗೊಂಡರು. ಅದರಂತೆ ಐದಾರು ವರ್ಷಗಳಿಂದ ಸಾರ್ವಜನಿಕವಾಗಿ ಒಂದೇ ಕಡೆ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ.</p>.<p>ನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೋವಿಡ್ ಕಾರಣದಿಂದ ಎರಡು ವರ್ಷ ಈ ಸಂಭ್ರಮಕ್ಕೆ ತಡೆ ಉಂಟಾಗಿತ್ತು. ಸೆಪ್ಟೆಂಬರ್ 7ರಂದು ಗಣಪತಿ ಮೆರವಣಿಗೆ ಹಾಗೂ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಸರ್ವಧರ್ಮಿಯರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ವಿಶೇಷ.</p>.<p>ಅಂದು ಜನಪದ ಕಲಾತಂಡಗಳಿಂದ ವಿವಿಧ ವೇಷಭೂಷಣಗಳ ಪ್ರದರ್ಶನದೊಂದಿಗೆ ಗ್ರಾಮದ ಪ್ರತಿ ಬೀದಿಗಳಲ್ಲೂ ಮೆರವಣಿಗೆ ನಡೆಯಲಿದೆ. ಸಿಡಿಮದ್ದು ಪ್ರದರ್ಶನದೊಂದಿಗೆ ತ್ಯಾಗರ್ತಿಯ ಅಗಸರ ಹೊಳೆಯಲ್ಲಿ ಗಣಪತಿ ವಿಸರ್ಜನೆ ನಡೆಯಲಿದೆ.</p>.<p>***</p>.<p>ಗ್ರಾಮದ ಪ್ರತಿಯೊಬ್ಬರೂ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಪ್ರತಿ ವರ್ಷವೂ ಇದೇ ರೀತಿಯ ಸಹಕಾರ ನಿರೀಕ್ಷಿಸುತ್ತೇವೆ.<br />-<em><strong>ರಾಘವೇಂದ್ರ, ಅಧ್ಯಕ್ಷ, ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ, ತ್ಯಾಗರ್ತಿ</strong></em></p>.<p>***</p>.<p>ಗ್ರಾಮದ ಜನರೆಲ್ಲರೂ ಸೇರಿ ಗಣಪತಿ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷದ ಸಂಗತಿ. ಮುಂದೆಯೂ ಇದೇ ರೀತಿ ಶಾಂತ ರೀತಿಯಿಂದ ನಡೆಸಿ ಗ್ರಾಮದ ಯಶಸ್ಸಿಗೆ ಕೈ ಜೋಡಿಸಿ.<br />-<em><strong>ಇಸಾಕ್, ಉಪಾಧ್ಯಕ್ಷ, ತ್ಯಾಗರ್ತಿ ಗ್ರಾಮ ಪಂಚಾಯಿತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>