<p><strong>ಶಿವಮೊಗ್ಗ:</strong> ನಗರದ ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸರುವ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಶನಿವಾರ ನಡೆಯಲಿದೆ. ಇಡೀ ನಗರ ಅದ್ದೂರಿಯಾಗಿ ಸಿಂಗಾರಗೊಂಡಿದೆ. </p>.<p>ಹಿಂದೂ ಕೇಸರಿ ಅಲಂಕಾರ ಸಮಿತಿಯಿಂದ ಗಣಪತಿ ಸಾಗುವ ಮಾರ್ಗಗಳಲ್ಲಿ ಮಾತ್ರವಲ್ಲದೇ ಇಡೀ ನಗರದ ಪ್ರಮುಖ ವೃತ್ತ, ರಸ್ತೆಗಳನ್ನು ಕಲಾ ಕೃತಿಗಳ ಮೂಲಕ ಅಲಂಕರಿಸಲಾಗಿದೆ. ಕೇಸರಿ ಬಂಟಿಂಗ್ ಕಟ್ಟಲಾಗಿದ್ದು, ಶಿವಮೊಗ್ಗ ನಗರ ಕೇಸರಿಮಯವಾಗಿದೆ. </p>.<p>ರಾಜ ಬೀದಿ ಉತ್ಸವಕ್ಕೆ ನಗರ ಮಾತ್ರವಲ್ಲದೇ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಜನರು ಬರಲಿದ್ದು, ತಿಂಡಿ, ಪಾನೀಯ, ಸಿಹಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವತೆಗಳು ಮತ್ತು ರಾಕ್ಷಸರ ಮಧ್ಯೆ ಅಮೃತಕ್ಕಾಗಿ ಹಾಲಿನ ಸಮುದ್ರವನ್ನು ಕಡೆಯುವ ಕಥೆಯ ಪ್ರತಿಕೃತಿಯನ್ನು ಈ ಬಾರಿಯ ಮಹಾದ್ವಾರದಲ್ಲಿ ಸ್ಥಾಪಿಸಲಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯ ಜನರು ಗಾಂಧಿ ಬಜಾರ್ ಮುಂಭಾಗ ಸಮುದ್ರ ಮಥನದ ಪ್ರತಿಕೃತಿ ಬಳಿ ಬಂದು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡರು. </p>.<p>ನೆಹರು ರಸ್ತೆಯ ಪ್ರವೇಶದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಹೆಸರಿನ ಮಹಾದ್ವಾರ ನಿರ್ಮಿಸಲಾಗಿದೆ. ರಾಜಬೀದಿ ಉತ್ಸವಕ್ಕೆ ಶುಭ ಕೋರಿ ಫ್ಲೆಕ್ಸ್ ಹಾಕಲಾಗಿದೆ. ಗಣಪತಿ ಮೂರ್ತಿಗೆ ಬೃಹತ್ ಹೂವಿನ ಹಾರ ಹಾಗೂ ಹಣ್ಣಿನ ಹಾರಗಳನ್ನು ಹಾಕಲು ಕ್ರೇನ್ಗಳನ್ನು ತರಲಾಗಿದೆ. </p>.<p>ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಇಡೀ ನಗರದಲ್ಲಿ ಸಿ.ಸಿ. ಟಿವಿ ಕ್ಯಾಮೆರಾ ಕಣ್ಗಾವಲು ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ನಗರದ ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸರುವ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಶನಿವಾರ ನಡೆಯಲಿದೆ. ಇಡೀ ನಗರ ಅದ್ದೂರಿಯಾಗಿ ಸಿಂಗಾರಗೊಂಡಿದೆ. </p>.<p>ಹಿಂದೂ ಕೇಸರಿ ಅಲಂಕಾರ ಸಮಿತಿಯಿಂದ ಗಣಪತಿ ಸಾಗುವ ಮಾರ್ಗಗಳಲ್ಲಿ ಮಾತ್ರವಲ್ಲದೇ ಇಡೀ ನಗರದ ಪ್ರಮುಖ ವೃತ್ತ, ರಸ್ತೆಗಳನ್ನು ಕಲಾ ಕೃತಿಗಳ ಮೂಲಕ ಅಲಂಕರಿಸಲಾಗಿದೆ. ಕೇಸರಿ ಬಂಟಿಂಗ್ ಕಟ್ಟಲಾಗಿದ್ದು, ಶಿವಮೊಗ್ಗ ನಗರ ಕೇಸರಿಮಯವಾಗಿದೆ. </p>.<p>ರಾಜ ಬೀದಿ ಉತ್ಸವಕ್ಕೆ ನಗರ ಮಾತ್ರವಲ್ಲದೇ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಜನರು ಬರಲಿದ್ದು, ತಿಂಡಿ, ಪಾನೀಯ, ಸಿಹಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವತೆಗಳು ಮತ್ತು ರಾಕ್ಷಸರ ಮಧ್ಯೆ ಅಮೃತಕ್ಕಾಗಿ ಹಾಲಿನ ಸಮುದ್ರವನ್ನು ಕಡೆಯುವ ಕಥೆಯ ಪ್ರತಿಕೃತಿಯನ್ನು ಈ ಬಾರಿಯ ಮಹಾದ್ವಾರದಲ್ಲಿ ಸ್ಥಾಪಿಸಲಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯ ಜನರು ಗಾಂಧಿ ಬಜಾರ್ ಮುಂಭಾಗ ಸಮುದ್ರ ಮಥನದ ಪ್ರತಿಕೃತಿ ಬಳಿ ಬಂದು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡರು. </p>.<p>ನೆಹರು ರಸ್ತೆಯ ಪ್ರವೇಶದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಹೆಸರಿನ ಮಹಾದ್ವಾರ ನಿರ್ಮಿಸಲಾಗಿದೆ. ರಾಜಬೀದಿ ಉತ್ಸವಕ್ಕೆ ಶುಭ ಕೋರಿ ಫ್ಲೆಕ್ಸ್ ಹಾಕಲಾಗಿದೆ. ಗಣಪತಿ ಮೂರ್ತಿಗೆ ಬೃಹತ್ ಹೂವಿನ ಹಾರ ಹಾಗೂ ಹಣ್ಣಿನ ಹಾರಗಳನ್ನು ಹಾಕಲು ಕ್ರೇನ್ಗಳನ್ನು ತರಲಾಗಿದೆ. </p>.<p>ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಇಡೀ ನಗರದಲ್ಲಿ ಸಿ.ಸಿ. ಟಿವಿ ಕ್ಯಾಮೆರಾ ಕಣ್ಗಾವಲು ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>