<p><strong>ಶಿವಮೊಗ್ಗ:</strong> ಜಿಲ್ಲೆಯ ಸೊರಬದ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ ಓಂ ಗಣಪತಿ ಹಾಗೂ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯ ವೇಳೆ ಡಿ.ಜೆ. ಸದ್ದಿನ ಅಬ್ಬರಕ್ಕೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ರಾಜಶೇಖರ್ ತಲೆ ತಿರುಗಿ ಅಸ್ವಸ್ಥಗೊಂಡು ಬಿದ್ದಿದ್ದಾರೆ.</p>.<p>ಧ್ವನಿವರ್ಧಕದ ಅಬ್ಬರದಿಂದಾಗಿ ರಾಜಶೇಖರ್ ಕುಸಿದು ಕೆಳಗೆ ಬೀಳುವುದು ಹಾಗೂ ಅವರನ್ನು ಅಲ್ಲಿದ್ದವರು ಉಪಚರಿಸಿ ಕರೆದೊಯ್ಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. </p>.<p>‘ಮೆರವಣಿಗೆ ವೇಳೆ ಎರಡು ಧ್ವನಿವರ್ಧಕ, ಬೇಸ್ ಬಳಸಲಾಗಿದೆ. ರಾಜಶೇಖರ್ ಅವರಿಗೆ ರಕ್ತದೊತ್ತಡ ಹೆಚ್ಚಿ ಕಿವಿಗೆ ತೊಂದರೆಯಾಗಿದೆ. ಈಗ ಗುಣಮುಖರಾಗಿದ್ದಾರೆ’ ಎಂದು ಎಸ್ಪಿ ಜಿ.ಕೆ. ಮಿಥುನ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಿಯಮ ಉಲ್ಲಂಘನೆ ಬಗ್ಗೆ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಡಿ.ಜೆ. ಉಪಕರಣಗಳ ಮುಟ್ಟುಗೋಲಿಗೆ ಸ್ಥಳೀಯ ಠಾಣೆಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಿಲ್ಲೆಯ ಸೊರಬದ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ ಓಂ ಗಣಪತಿ ಹಾಗೂ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯ ವೇಳೆ ಡಿ.ಜೆ. ಸದ್ದಿನ ಅಬ್ಬರಕ್ಕೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ರಾಜಶೇಖರ್ ತಲೆ ತಿರುಗಿ ಅಸ್ವಸ್ಥಗೊಂಡು ಬಿದ್ದಿದ್ದಾರೆ.</p>.<p>ಧ್ವನಿವರ್ಧಕದ ಅಬ್ಬರದಿಂದಾಗಿ ರಾಜಶೇಖರ್ ಕುಸಿದು ಕೆಳಗೆ ಬೀಳುವುದು ಹಾಗೂ ಅವರನ್ನು ಅಲ್ಲಿದ್ದವರು ಉಪಚರಿಸಿ ಕರೆದೊಯ್ಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. </p>.<p>‘ಮೆರವಣಿಗೆ ವೇಳೆ ಎರಡು ಧ್ವನಿವರ್ಧಕ, ಬೇಸ್ ಬಳಸಲಾಗಿದೆ. ರಾಜಶೇಖರ್ ಅವರಿಗೆ ರಕ್ತದೊತ್ತಡ ಹೆಚ್ಚಿ ಕಿವಿಗೆ ತೊಂದರೆಯಾಗಿದೆ. ಈಗ ಗುಣಮುಖರಾಗಿದ್ದಾರೆ’ ಎಂದು ಎಸ್ಪಿ ಜಿ.ಕೆ. ಮಿಥುನ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಿಯಮ ಉಲ್ಲಂಘನೆ ಬಗ್ಗೆ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಡಿ.ಜೆ. ಉಪಕರಣಗಳ ಮುಟ್ಟುಗೋಲಿಗೆ ಸ್ಥಳೀಯ ಠಾಣೆಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>