ಭದ್ರಾವತಿ: ಶಿವಮೊಗ್ಗ ಜಿಲ್ಲೆಯಾದ್ಯಂತ 6 ತಿಂಗಳಲ್ಲಿ ನಡೆದ ಪೊಲೀಸರ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ. 825 ಗ್ರಾಂ ಒಣ ಗಾಂಜಾವನ್ನು ಶುಕ್ರವಾರ ಸಮೀಪದ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಾಶ ಪಡಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಸಮ್ಮುಖದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಒಟ್ಟು 42 ಪ್ರಕರಣಗಳಲ್ಲಿ ಪಡಿಸಿಕೊಳ್ಳಲಾದ ₹ 13.16 ಲಕ್ಷ ಮೌಲ್ಯದ ಗಾಂಜಾವನ್ನು ನಾಶಪಡಿಸಲಾಯಿತು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ. ಕಾರ್ಯಪ್ಪ, ಗಿರೀಶ್ ಸಿ.ಎಸ್, ಹರೀಶ್ ದೆಲಂತ ಬೆಟ್ಟು, ಡಿವೈಎಸ್ಪಿ ಬಾಬು ಆಂಜನಪ್ಪ, ಸುರೇಶ್ ಎಂ., ವಿನಾಯಕ ಬಿ.ಆರ್. ಭಾಗವಹಿಸಿದ್ದರು.
ಗಾಂಜಾ ಮಾರಾಟ, ಸಾಗಣೆ, ಸಂಗ್ರಹ ಮಾಡುವವರ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಇಲಾಖೆ ತಿಳಿಸಿದೆ.