ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಮಧ್ಯಾಹ್ನ 3.30ಕ್ಕೆ ಕಾದಂಬರಿ ಬಿಡುಗಡೆಗೊಳ್ಳಲಿದೆ. ವೈವಿಧ್ಯ ಕಳೆದುಕೊಂಡ ಮಲೆನಾಡು, ಗ್ರಾಮೀಣ ಜನಜೀವನದ ಮೇಲಿನ ಗಂಭೀರ ಪರಿಣಾಮ, ಹಣ, ಮತಾಂತರ, ಪ್ರೀತಿ, ದುಃಖ, ವ್ಯಾಮೋಹ, ಆಸೆ, ಪರಿಸರ ಕಾದಂಬರಿಯ ಮೂಲ ಕಥಾವಸ್ತು’ ಎಂದರು.