<p><strong>ಸಾಗರ: </strong>ಪೋಷಕರು ಮಕ್ಕಳಿಗೆ ಐಸ್ ಕ್ರೀಮ್, ಪಾನಿಪೂರಿ ಕೊಡಿಸುವ ಜತೆಗೆ ಪುಸ್ತಕವೊಂದನ್ನು ಕೊಡಿಸಿ ಎಂದು ಸಾಹಿತಿ ನಾ.ಡಿಸೋಜ ಸಲಹೆ ನೀಡಿದರು.</p>.<p>ಇಲ್ಲಿನ ಸೇವಾ ಸಾಗರ ಶಾಲೆಯ ಅಜಿತ್ ಸಭಾಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಶನಿವಾರ ಏರ್ಪಡಿಸಿದ್ದ 8ನೇ ತಾಲ್ಲೂಕು ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಪುಸ್ತಕ ಕೊಡಿಸುವ ಜೊತೆಗೆ ಆ ಪುಸ್ತಕದ ಬಗ್ಗೆ ನಾಲ್ಕು ಒಳ್ಳೆಯ ಮಾತುಗಳನ್ನು ಹೇಳುವ ಮೂಲಕ ಓದಿಗೆ ಅವರನ್ನು ಪ್ರೇರೇಪಿಸಬೇಕು. ಬದುಕಿನ ಹಲವು ಸತ್ಯಗಳನ್ನು ಸಾಹಿತ್ಯ ಅನಾವರಣಗೊಳಿಸುತ್ತದೆ ಎಂಬುದನ್ನು ಮಕ್ಕಳಿಗೆ ತಿಳಿಸಬೇಕಿದೆ ಎಂದರು.</p>.<p>ಮರಾಠಿಯಲ್ಲಿ ಮಕ್ಕಳ ಸಾಹಿತ್ಯಕ್ಕೆ ಹೆಚ್ಚು ಮನ್ನಣೆ ದೊರಕುತ್ತಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಅಲ್ಲಿ ಗ್ರಂಥಾಲಯಗಳಿವೆ. ನಮ್ಮ ರಾಜ್ಯದಲ್ಲೂ ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.</p>.<p>ಆಶಯ ಭಾಷಣ ಮಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ‘ಪೋಷಕರು ಮಕ್ಕಳಿಗೆ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಎಲ್ಲ ರೀತಿಯ ಜ್ಞಾನದ ಕಿಂಡಿಗಳನ್ನು ತೆರೆದಿಡಬೇಕು. ಸೌಲಭ್ಯಗಳಿಂದ ಮಕ್ಕಳು ಮೈಮರೆಯದಂತೆ ಎಚ್ಚರವಹಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷೆ ಸ್ಫೂರ್ತಿ ಆನಂದಪುರ, ಪ್ರಮುಖರಾದ ಅಶ್ವಿನಿಕುಮಾರ್, ವಿ.ಗಣೇಶ್, ಜಿ.ಪರಮೇಶ್ವರಪ್ಪ, ಡಿ.ಗಣಪತಪ್ಪ, ವಿ.ಟಿ. ಸ್ವಾಮಿ, ಪರಮೇಶ್ವರ ಕರೂರು, ಜಿ. ನಾಗೇಶ್, ಸತ್ಯನಾರಾಯಣ ಸಿರಿವಂತೆ, ಗುಡ್ಡಪ್ಪ ಜೋಗಿ, ಬಿ.ಡಿ.ರವಿಕುಮಾರ್, ಕೃಷ್ಣಮೂರ್ತಿ ಇದ್ದರು. ಮಾನ್ವಿ ಕರೂರು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಪೋಷಕರು ಮಕ್ಕಳಿಗೆ ಐಸ್ ಕ್ರೀಮ್, ಪಾನಿಪೂರಿ ಕೊಡಿಸುವ ಜತೆಗೆ ಪುಸ್ತಕವೊಂದನ್ನು ಕೊಡಿಸಿ ಎಂದು ಸಾಹಿತಿ ನಾ.ಡಿಸೋಜ ಸಲಹೆ ನೀಡಿದರು.</p>.<p>ಇಲ್ಲಿನ ಸೇವಾ ಸಾಗರ ಶಾಲೆಯ ಅಜಿತ್ ಸಭಾಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಶನಿವಾರ ಏರ್ಪಡಿಸಿದ್ದ 8ನೇ ತಾಲ್ಲೂಕು ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಪುಸ್ತಕ ಕೊಡಿಸುವ ಜೊತೆಗೆ ಆ ಪುಸ್ತಕದ ಬಗ್ಗೆ ನಾಲ್ಕು ಒಳ್ಳೆಯ ಮಾತುಗಳನ್ನು ಹೇಳುವ ಮೂಲಕ ಓದಿಗೆ ಅವರನ್ನು ಪ್ರೇರೇಪಿಸಬೇಕು. ಬದುಕಿನ ಹಲವು ಸತ್ಯಗಳನ್ನು ಸಾಹಿತ್ಯ ಅನಾವರಣಗೊಳಿಸುತ್ತದೆ ಎಂಬುದನ್ನು ಮಕ್ಕಳಿಗೆ ತಿಳಿಸಬೇಕಿದೆ ಎಂದರು.</p>.<p>ಮರಾಠಿಯಲ್ಲಿ ಮಕ್ಕಳ ಸಾಹಿತ್ಯಕ್ಕೆ ಹೆಚ್ಚು ಮನ್ನಣೆ ದೊರಕುತ್ತಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಅಲ್ಲಿ ಗ್ರಂಥಾಲಯಗಳಿವೆ. ನಮ್ಮ ರಾಜ್ಯದಲ್ಲೂ ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.</p>.<p>ಆಶಯ ಭಾಷಣ ಮಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ‘ಪೋಷಕರು ಮಕ್ಕಳಿಗೆ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಎಲ್ಲ ರೀತಿಯ ಜ್ಞಾನದ ಕಿಂಡಿಗಳನ್ನು ತೆರೆದಿಡಬೇಕು. ಸೌಲಭ್ಯಗಳಿಂದ ಮಕ್ಕಳು ಮೈಮರೆಯದಂತೆ ಎಚ್ಚರವಹಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷೆ ಸ್ಫೂರ್ತಿ ಆನಂದಪುರ, ಪ್ರಮುಖರಾದ ಅಶ್ವಿನಿಕುಮಾರ್, ವಿ.ಗಣೇಶ್, ಜಿ.ಪರಮೇಶ್ವರಪ್ಪ, ಡಿ.ಗಣಪತಪ್ಪ, ವಿ.ಟಿ. ಸ್ವಾಮಿ, ಪರಮೇಶ್ವರ ಕರೂರು, ಜಿ. ನಾಗೇಶ್, ಸತ್ಯನಾರಾಯಣ ಸಿರಿವಂತೆ, ಗುಡ್ಡಪ್ಪ ಜೋಗಿ, ಬಿ.ಡಿ.ರವಿಕುಮಾರ್, ಕೃಷ್ಣಮೂರ್ತಿ ಇದ್ದರು. ಮಾನ್ವಿ ಕರೂರು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>