2019–20ನೇ ಸಾಲಿನಲ್ಲಿಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛಮೇವ ಜಯತೆ ಕಾರ್ಯಕ್ರಮ ಅನುಷ್ಠಾನದಲ್ಲಿ ಸುಮಾರು ₨ 23 ಲಕ್ಷ, ಕೆಲವು ವರ್ಷಗಳ ಹಿಂದೆಅನುಷ್ಠಾನದಲ್ಲಿದ್ದ ಗೋಬರ್ ಗ್ಯಾಸ್ ಸ್ಥಾವರ ಅಳವಡಿಕೆಯ ಅವ್ಯವಹಾರದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಹಲವು ಜಿಲ್ಲಾ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು.