ಸಾಗರ: ತಾಲ್ಲೂಕಿನ ಕೋಟೆಕೊಪ್ಪ ಗ್ರಾಮದಲ್ಲಿ ಮಂಗಳವಾರ ಆಭರಣ ಪಾಲಿಷ್ ಮಾಡಿಕೊಡುವುದಾಗಿ ನಂಬಿಸಿ 40 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ.
ಗ್ರಾಮದ ಸರೋಜಮ್ಮ ಎಂಬುವವರಮನೆಗೆ ಹೋದ ಈ ಯುವಕರು ಮೊದಲು ಬೆಳ್ಳಿಯ ಗೆಜ್ಜೆಯನ್ನು ಪಾಲಿಷ್ ಮಾಡಿಕೊಟ್ಟಿದ್ದಾರೆ. ನಂತರ ಮಾಂಗಲ್ಯ ಸರವನ್ನು ಪಾಲಿಷ್ ಮಾಡುವುದಾಗಿ ಹೇಳಿ ಸರೋಜಮ್ಮ ಅವರಿಂದ ಅದನ್ನು ಪಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.