ಸಾಗರ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ. ಪರೀಕ್ಷೆ ಬರೆದಿದ್ದ 1,078 ವಿದ್ಯಾರ್ಥಿಗಳ ಪೈಕಿ 762 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ 71ರಷ್ಟು ಫಲಿತಾಂಶ ಬಂದಿದೆ.
109 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದು, 384 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಟಿ.ಎಸ್. ಅಭಿರಾಮ್ 593 ಅಂಕ ಗಳಿಸುವ ಮೂಲಕ ಜಿಲ್ಲೆಗೆ 5ನೇ ಸ್ಥಾನ ಪಡೆದಿದ್ದಾರೆ. ಅವರು ವಕೀಲ ದಂಪತಿ ಟಿ.ಎಸ್. ರಮಣ, ಉಷಾ ಪುತ್ರರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಎಚ್.ಎನ್. ಉಮೇಶ್, ಜಯಂತಿ ಅವರ ಪುತ್ರ ಶ್ರೀಧರ ಎಚ್.ಯು. 592 ಅಂಕ ಪಡೆಯುವ ಮೂಲಕ ಜಿಲ್ಲೆಗೆ 4ನೇ ಸ್ಥಾನ ಪಡೆದಿದ್ದಾರೆ. ಚಿನ್ಮಯಿ ಎಂ. 591 ಅಂಕ ಪಡೆಯುವ ಮೂಲಕ ಜಿಲ್ಲೆಗೆ 5ನೇ ಸ್ಥಾನ ಪಡೆದಿದ್ದಾರೆ.