ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಸರ್ಕಾರಿ ನೌಕರರ ಸಮ್ಮೇಳನ ಫೆಬ್ರುವರಿ 4ರಂದು ನಗರದ ಎನ್ಇಎಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಅದು ಬೆಳಿಗ್ಗೆ 10.30 ರಿಂದ ಸಂಜೆ 4ರವರೆಗೆ ಸಮ್ಮೇಳನ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಕಾರ್ಯಕ್ರಮವನ್ನು ಶಾಸಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಫ್ಯಾಮಿಲಿ ಮಾರ್ಟ್ ಅನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಡಾ.ಗುರುರಾಜ ಕರ್ಜಗಿ ಪ್ರಜಾಸ್ನೇಹಿ ಆಡಳಿತದ ಬಗ್ಗೆ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ನೌಕರರಿಗೆ ಒಒಡಿ ಸೌಲಭ್ಯ ಇದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನೌಕರರ ಫ್ಯಾಮಿಟಿ ಮಾರ್ಟ್: ಸರ್ಕಾರಿ ನೌಕರರಿಗೆಂದೇ ಫ್ಯಾಮಿಲಿ ಮಾರ್ಟ್ ನೌಕರರ ಭವನದ ಪಕ್ಕದಲ್ಲಿಯೇ ಸಿದ್ಧವಾಗಿದೆ. ಅಲ್ಲಿ ಶೇ 10 ರಿಂದ 60ರವರೆಗೆ ರಿಯಾಯಿತಿ ಸಿಗಲಿದೆ. ₹ 4 ಕೋಟಿ ವೆಚ್ಚದಲ್ಲಿ ಇದನ್ನು ಸಿದ್ಧಪಡಿಸಲಾಗಿದೆ. ಬಳಿಕ ಉಳಿದ ಜಿಲ್ಲೆಗಳಲ್ಲಿಯೂ ಮಾರ್ಟ್ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.