ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಿಜೆಪಿ ಮುಖಂಡರು ಹೇಳಿದ್ದಾರೆ. ಆದರೆ ಕೇವಲ 9,600 ಎಕರೆ ಪ್ರದೇಶವನ್ನು ಡಿನೋಟಿಫೈ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. 1960ರಲ್ಲಿ 12,000 ಇದ್ದ ಸಂತ್ರಸ್ತರ ಸಂಖ್ಯೆ ಈಗ 50,000 ಸಾವಿರಕ್ಕೆ ಏರಿದೆ. ಈ ವಾಸ್ತವ ಅಂಶವನ್ನು ಪ್ರಸ್ತಾವನೆ ಕಳಿಸುವಾಗ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.