<p><strong>ಸಾಗರ:</strong> ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಸಂತ್ರಸ್ತರ ಕಣ್ಣೊರೆಸುವ ತಂತ್ರವನ್ನು ನಡೆಸುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದರು.</p>.<p>ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ಕಾಂಗ್ರೆಸ್ ಪಕ್ಷ ನವೆಂಬರ್ 28ರಂದು ಆಯನೂರಿನಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ಏರ್ಪಡಿಸಿದೆ. ಪಾದಯಾತ್ರೆ ಯಶಸ್ವಿಯಾಗದಂತೆ ತಡೆಯಲು ಬಿಜೆಪಿ ಮುಖಂಡರು ವಿವಿಧ ರೀತಿಯ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಿಜೆಪಿ ಮುಖಂಡರು ಹೇಳಿದ್ದಾರೆ. ಆದರೆ ಕೇವಲ 9,600 ಎಕರೆ ಪ್ರದೇಶವನ್ನು ಡಿನೋಟಿಫೈ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. 1960ರಲ್ಲಿ 12,000 ಇದ್ದ ಸಂತ್ರಸ್ತರ ಸಂಖ್ಯೆ ಈಗ 50,000 ಸಾವಿರಕ್ಕೆ ಏರಿದೆ. ಈ ವಾಸ್ತವ ಅಂಶವನ್ನು ಪ್ರಸ್ತಾವನೆ ಕಳಿಸುವಾಗ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಮುಳುಗಡೆ ಸಂತ್ರಸ್ತ ರೈತರು ಕಂದಾಯ ಭೂಮಿ ಮಾತ್ರವಲ್ಲದೆ ಅರಣ್ಯ ಭೂಮಿ, ಗೋಮಾಳ, ಸೊಪ್ಪಿನಬೆಟ್ಟ ಪ್ರದೇಶದಲ್ಲೂ ಸಾಗುವಳಿ ಕೈಗೊಂಡಿದ್ದಾರೆ. ರೈತರು ಯಾವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೊ ಅದೇ ಭೂಮಿಯನ್ನು ಅವರಿಗೆ ಮಂಜೂರು ಮಾಡುವುದು ಸೂಕ್ತ ಎಂದರು.</p>.<p>ಪ್ರಮುಖರಾದ ಗಣಪತಿ ಹೆನಗೆರೆ, ರಫೀಕ್ ಬಾಬಾಜಾನ್, ಅರುಣ್ ಪೂಜಾರಿ, ರಾಮಚಂದ್ರ ಎಂ.ಡಿ. ಜಯಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಸಂತ್ರಸ್ತರ ಕಣ್ಣೊರೆಸುವ ತಂತ್ರವನ್ನು ನಡೆಸುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದರು.</p>.<p>ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ಕಾಂಗ್ರೆಸ್ ಪಕ್ಷ ನವೆಂಬರ್ 28ರಂದು ಆಯನೂರಿನಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ಏರ್ಪಡಿಸಿದೆ. ಪಾದಯಾತ್ರೆ ಯಶಸ್ವಿಯಾಗದಂತೆ ತಡೆಯಲು ಬಿಜೆಪಿ ಮುಖಂಡರು ವಿವಿಧ ರೀತಿಯ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಿಜೆಪಿ ಮುಖಂಡರು ಹೇಳಿದ್ದಾರೆ. ಆದರೆ ಕೇವಲ 9,600 ಎಕರೆ ಪ್ರದೇಶವನ್ನು ಡಿನೋಟಿಫೈ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. 1960ರಲ್ಲಿ 12,000 ಇದ್ದ ಸಂತ್ರಸ್ತರ ಸಂಖ್ಯೆ ಈಗ 50,000 ಸಾವಿರಕ್ಕೆ ಏರಿದೆ. ಈ ವಾಸ್ತವ ಅಂಶವನ್ನು ಪ್ರಸ್ತಾವನೆ ಕಳಿಸುವಾಗ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಮುಳುಗಡೆ ಸಂತ್ರಸ್ತ ರೈತರು ಕಂದಾಯ ಭೂಮಿ ಮಾತ್ರವಲ್ಲದೆ ಅರಣ್ಯ ಭೂಮಿ, ಗೋಮಾಳ, ಸೊಪ್ಪಿನಬೆಟ್ಟ ಪ್ರದೇಶದಲ್ಲೂ ಸಾಗುವಳಿ ಕೈಗೊಂಡಿದ್ದಾರೆ. ರೈತರು ಯಾವ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೊ ಅದೇ ಭೂಮಿಯನ್ನು ಅವರಿಗೆ ಮಂಜೂರು ಮಾಡುವುದು ಸೂಕ್ತ ಎಂದರು.</p>.<p>ಪ್ರಮುಖರಾದ ಗಣಪತಿ ಹೆನಗೆರೆ, ರಫೀಕ್ ಬಾಬಾಜಾನ್, ಅರುಣ್ ಪೂಜಾರಿ, ರಾಮಚಂದ್ರ ಎಂ.ಡಿ. ಜಯಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>