<p><strong>ಶಿಕಾರಿಪುರ:</strong> ಹಳಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಜ.11ರಂದು ನಡೆಯಲಿದೆ ಎಂದು ಶತಮಾನೋತ್ಸವ ಸಲಹಾ ಸಮಿತಿ ಅಧ್ಯಕ್ಷ ಕೆ.ಜಿ.ವಸಂತಗೌಡ ಹೇಳಿದರು. </p>.<p>ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. </p>.<p>‘ಶೈಕ್ಷಣಿಕ ಕ್ಷೇತ್ರದ ಸ್ಪರ್ಧೆಯಲ್ಲಿ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬರುತ್ತಿರುವ ಈ ದಿನಗಳಲ್ಲಿ ಸರ್ಕಾರಿ ಶಾಲೆಯೊಂದು ಶತಮಾನೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ. ಬಾಲಕಿಯರಿಗಾಗಿ ಬ್ರಿಟೀಷ್ ಸರ್ಕಾರ 1908ರಲ್ಲಿ ಆರಂಭಿಸಿದ ಈ ಶಾಲೆಗೆ 117 ವರ್ಷವಾಗಿದೆ. ಶಾಲೆ ನಿರ್ಮಾಣದ ದಾಖಲೆ ಈಚೆಗೆ ಲಭ್ಯವಾಗಿರುವ ಕಾರಣಕ್ಕೆ ಆಚರಣೆ ತಡವಾಗಿದೆ. ಆಚರಣೆ ನೆಪದಲ್ಲಿ ಶಾಲೆಗೆ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಭರದಿಂದ ಸಾಗಿದೆ’ ಎಂದು ತಿಳಿಸಿದರು. </p>.<p>‘ಶಾಲೆಯ ಹಿಂದಿನ ಶಿಕ್ಷಕರ ಪುತ್ರ ಎಂ.ಪಿ.ಕುಮಾರ್ ಹೊಸದಾಗಿ ಅಡುಗೆ ಮನೆ ನಿರ್ಮಿಸಿಕೊಟ್ಟಿದ್ದಾರೆ. ಹಳೆ ವಿದ್ಯಾರ್ಥಿಗಳು, ಶಿಕ್ಷಕ ಎಸ್.ಆರ್.ಕೃಷ್ಣಪ್ಪ ಪುತ್ರಿಯರು ₹50 ಸಾವಿರ ಮೌಲ್ಯದ ಪರಿಕರ, ಕಾಶೀಬಾಯಿ ಸೇರಿದಂತೆ ಹಲವರು ದೇಣಿಗೆ ನೀಡಿದ್ದಾರೆ’ ಎಂದರು. </p>.<p>ಸಂಸದ ಬಿ.ವೈ.ರಾಘವೇಂದ್ರ ಪುರಸಭೆ ಮೂಲಕ ಕೊಠಡಿ ನಿರ್ಮಾಣ ಸೇರಿ ಹಲವು ಕಾಮಗಾರಿ ನಡೆಸುವುದಕ್ಕೆ ಸೂಚಿಸಿದ್ದಾರೆ. ಶತಮಾನೋತ್ಸವ ಸಮಿತಿ ಸದಸ್ಯರೆಲ್ಲರೂ ವೈಯಕ್ತಿಕವಾಗಿ ಹಣ ನೀಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು. </p>.<p>ಸಚಿವ ಮಧು ಬಂಗಾರಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತವೀರಪ್ಪಗೌಡ ಸೇರಿದಂತೆ ರಾಜಕೀಯ ಮುಖಂಡರು, ಶಾಲೆಯ ಹಳೆಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. </p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸಂಗೀತಾ ಕುಮಾರನಾಯ್ಕ, ಶತಮಾನೋತ್ಸವ ಸಮಿತಿಯ ಮಂಜುನಾಥ್, ರಾಜಲಕ್ಷ್ಮಿ, ಮಂಜುಸಿಂಗ್, ಎಂ.ಬಿ.ಚನ್ನವೀರಪ್ಪ, ಸುರೇಂದ್ರಗೌಡ, ಹರಿಶ್ಚಂದ್ರ, ಮಂಜಣ್ಣ, ಶಿಕ್ಷಕಿ ಲಕ್ಷ್ಮಿ ಸುಣಗಾರ್, ದೀಪು ದೀಕ್ಷಿತ್, ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ಹಳಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಜ.11ರಂದು ನಡೆಯಲಿದೆ ಎಂದು ಶತಮಾನೋತ್ಸವ ಸಲಹಾ ಸಮಿತಿ ಅಧ್ಯಕ್ಷ ಕೆ.ಜಿ.ವಸಂತಗೌಡ ಹೇಳಿದರು. </p>.<p>ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. </p>.<p>‘ಶೈಕ್ಷಣಿಕ ಕ್ಷೇತ್ರದ ಸ್ಪರ್ಧೆಯಲ್ಲಿ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬರುತ್ತಿರುವ ಈ ದಿನಗಳಲ್ಲಿ ಸರ್ಕಾರಿ ಶಾಲೆಯೊಂದು ಶತಮಾನೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ. ಬಾಲಕಿಯರಿಗಾಗಿ ಬ್ರಿಟೀಷ್ ಸರ್ಕಾರ 1908ರಲ್ಲಿ ಆರಂಭಿಸಿದ ಈ ಶಾಲೆಗೆ 117 ವರ್ಷವಾಗಿದೆ. ಶಾಲೆ ನಿರ್ಮಾಣದ ದಾಖಲೆ ಈಚೆಗೆ ಲಭ್ಯವಾಗಿರುವ ಕಾರಣಕ್ಕೆ ಆಚರಣೆ ತಡವಾಗಿದೆ. ಆಚರಣೆ ನೆಪದಲ್ಲಿ ಶಾಲೆಗೆ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಭರದಿಂದ ಸಾಗಿದೆ’ ಎಂದು ತಿಳಿಸಿದರು. </p>.<p>‘ಶಾಲೆಯ ಹಿಂದಿನ ಶಿಕ್ಷಕರ ಪುತ್ರ ಎಂ.ಪಿ.ಕುಮಾರ್ ಹೊಸದಾಗಿ ಅಡುಗೆ ಮನೆ ನಿರ್ಮಿಸಿಕೊಟ್ಟಿದ್ದಾರೆ. ಹಳೆ ವಿದ್ಯಾರ್ಥಿಗಳು, ಶಿಕ್ಷಕ ಎಸ್.ಆರ್.ಕೃಷ್ಣಪ್ಪ ಪುತ್ರಿಯರು ₹50 ಸಾವಿರ ಮೌಲ್ಯದ ಪರಿಕರ, ಕಾಶೀಬಾಯಿ ಸೇರಿದಂತೆ ಹಲವರು ದೇಣಿಗೆ ನೀಡಿದ್ದಾರೆ’ ಎಂದರು. </p>.<p>ಸಂಸದ ಬಿ.ವೈ.ರಾಘವೇಂದ್ರ ಪುರಸಭೆ ಮೂಲಕ ಕೊಠಡಿ ನಿರ್ಮಾಣ ಸೇರಿ ಹಲವು ಕಾಮಗಾರಿ ನಡೆಸುವುದಕ್ಕೆ ಸೂಚಿಸಿದ್ದಾರೆ. ಶತಮಾನೋತ್ಸವ ಸಮಿತಿ ಸದಸ್ಯರೆಲ್ಲರೂ ವೈಯಕ್ತಿಕವಾಗಿ ಹಣ ನೀಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು. </p>.<p>ಸಚಿವ ಮಧು ಬಂಗಾರಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತವೀರಪ್ಪಗೌಡ ಸೇರಿದಂತೆ ರಾಜಕೀಯ ಮುಖಂಡರು, ಶಾಲೆಯ ಹಳೆಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. </p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸಂಗೀತಾ ಕುಮಾರನಾಯ್ಕ, ಶತಮಾನೋತ್ಸವ ಸಮಿತಿಯ ಮಂಜುನಾಥ್, ರಾಜಲಕ್ಷ್ಮಿ, ಮಂಜುಸಿಂಗ್, ಎಂ.ಬಿ.ಚನ್ನವೀರಪ್ಪ, ಸುರೇಂದ್ರಗೌಡ, ಹರಿಶ್ಚಂದ್ರ, ಮಂಜಣ್ಣ, ಶಿಕ್ಷಕಿ ಲಕ್ಷ್ಮಿ ಸುಣಗಾರ್, ದೀಪು ದೀಕ್ಷಿತ್, ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>