ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಸದಸ್ಯ ಆಯ್ಕೆ ಅಸಿಂಧು

Last Updated 5 ಡಿಸೆಂಬರ್ 2021, 5:01 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ನಾಮಪತ್ರ ಸಲ್ಲಿಕೆ ವೇಳೆ ಅಪೂರ್ಣ ಮಾಹಿತಿ ನೀಡಿದ ಕಾರಣಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್. ನಾಗರಾಜ್ (ಕುರುವಳ್ಳಿ ನಾಗರಾಜ್) ಸದಸ್ಯತ್ವ ಅಸಿಂಧುಗೊಂಡಿದೆ.

ಬಿಸಿಎಂ (ಎ) ಮೀಸಲಾದ ಕ್ಷೇತ್ರಕ್ಕೆ 2020ರ ಡಿ. 22ರಂದು ನಾಗರಾಜ್ ಸ್ವಯಂ ಘೋಷಿತ ವಿವರವುಳ್ಳ ನಾಮಪತ್ರ ಸಲ್ಲಿಕೆ ಮಾಡಿದ್ದರು. ನಾಮಪತ್ರದಲ್ಲಿ ಅಪೂರ್ಣ ಮಾಹಿತಿ ಒದಗಿಸಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಪರಾಜಿತ ಅಭ್ಯರ್ಥಿ ಗೋಪಾಲ ಪೂಜಾರಿ ತೀರ್ಥಹಳ್ಳಿ ಹಿರಿಯ ವ್ಯವಹಾರ ನ್ಯಾಯಾಲಯಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಪಂಚಾಯತ್‌ ರಾಜ್ ಅಧಿನಿಯಮ 1993ರ ಸೆಕ್ಷನ್ 15 ಮತ್ತು 16ರಂತೆ ಸಲ್ಲಿಕೆಯಾದ ಆಕ್ಷೇಪಣಾ ಅರ್ಜಿಯನ್ನು ಪುರಸ್ಕರಿಸಿದೆ. 2021ರ ನವೆಂಬರ್ 27ರಂದು ನ್ಯಾಯಾಧೀಶರಾದ ಜಿ. ಗೀತಾಂಜಲಿ ತೀರ್ಪು ಪ್ರಕಟಿಸಿದ್ದು, ನ್ಯಾಯಾಲಯ ಆಕ್ಷೇಪಣೆಯನ್ನು ಎತ್ತಿಹಿಡಿದ ಬೆನ್ನಲ್ಲಿ ಪರಾಜಿತ ಅಭ್ಯರ್ಥಿ ಗೋಪಾಲ ಪೂಜಾರಿ ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT