‘ಪಂಚಾಯಿತಿಯಲ್ಲಿ ಪಿಡಿಒ ಇಲ್ಲದೇ ಇರುವುದರಿಂದ ಯಾವುದೇ ಕೆಲಸಗಳು ಆಗುತ್ತಿಲ್ಲ.ಪಂಚಾಯಿತಿ ಸದಸ್ಯನಾಗಿ ಜನರ ಸಣ್ಣಪುಟ್ಟ ಕೆಲಸಕ್ಕೂ ಸ್ಪಂದಿಸಲು ಆಗುತ್ತಿಲ್ಲ. ನಾಲ್ಕೈದು ತಿಂಗಳಿನಲ್ಲಿ ಐದು ಜನ ಪಿಡಿಒಗಳು ವರ್ಗಾವಣೆಯಾಗಿದ್ದಾರೆ. ಯಾವ ಪಿಡಿಒಗಳೂ ಇಲ್ಲಿ ನೆಲೆ ನಿಲ್ಲುತ್ತಿಲ್ಲ. ಅಕ್ಕಪಕ್ಕದ ಗ್ರಾಮ ಪಂಚಾಯಿತಿಪಿಡಿಒಗಳನ್ನು ಇಲ್ಲಿಹಂಗಾಮಿಯಾಗಿ ನೇಮಕ ಮಾಡುತ್ತಿದ್ದು, ಅವರು ವಾರಕ್ಕೆ ಒಂದೆರಡು ದಿನ ಮಾತ್ರ ಬರುತ್ತಾರೆ. ಉಳಿದ ಅವಧಿಯಲ್ಲಿ ಅಭಿವೃದ್ದಿ ಅಧಿಕಾರಿಗಳು ಇರುವುದಿಲ್ಲ. ಇದರಿಂದ ಯಾವುದೇ ಕೆಲಸವಾಗುತ್ತಿಲ್ಲ. ಬೀದಿದೀಪ, ನೀರಿನ ಸಮಸ್ಯೆ ಬಗ್ಗೆ ಹೇಳಿದರೆ ಪಿಡಿಒ ಸ್ಪಂದಿಸುತ್ತಿಲ್ಲ. ಈ ಬಗ್ಗೆ ದೂರು ನೀಡೋಣ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗೆ ಕರೆಮಾಡಿದರೆ ಸ್ವೀಕರಿಸುತ್ತಿಲ್ಲ’ ಎಂದು ಖಲೀಮುಲ್ಲಾದೂರಿದರು.