ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದ ಸ್ವಚ್ಛತೆ,ಗೆ ಆದ್ಯತೆ ನೀಡಬೇಕು. ಕೋವಿಡ್ ಆರೈಕೆ ಕೇಂದ್ರಗಳು, ಆಸ್ಪತ್ರೆಗಳಿಗೆ ತಕ್ಷಣ ದಾಖಲಿಸಲು ಕ್ರಮ ಕೈಗೊಳ್ಳಬೇಕು. ಸಂತೆ, ಜಾತ್ರೆ, ಸಭೆ-ಸಮಾರಂಭ ನಿಷೇಧಿಸಬೇಕು. ಈ ಎಲ್ಲಾ ಚಟುವಟಿಕೆಗಳ ನಿರ್ವಹಣೆಗಾಗಿ 14 ಹಾಗೂ 15ನೇ ಹಣಕಾಸಿನ ನಿರ್ಬಂಧಿತ ಅನುದಾನ ಹಾಗೂಸರ್ಕಾರದ ₹ 50 ಲಕ್ಷ ಅನುದಾನ ಬಳಸಿಕೊಳ್ಳಬಹು ಎಂದು ಸೂಚಿಸಿದರು.