ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಗರ್ಭ ಜಲ ವಿದ್ಯುತ್ ಯೋಜನೆಗೆ ಅವಕಾಶ ನೀಡಲ್ಲ: ಈಶ್ವರಪ್ಪ

Last Updated 27 ಜೂನ್ 2020, 17:26 IST
ಅಕ್ಷರ ಗಾತ್ರ

ಶಿವಮೊಗ್ಗ: ಶರಾವತಿ ಭೂಗರ್ಭ ಜಲ ವಿದ್ಯುತ್ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು.

‘ಯಾರೋ ವಿಮಾನದಲ್ಲಿ ಬಂದು ಜಾಗ ನೋಡಿಕೊಂಡು ಹೋಗಿದ್ದಾರೆ, ಯೋಜನೆ ಅಭಿವೃದ್ಧಿಗೆ ಸರ್ವೆ ಕಾರ್ಯ ನಡೆಸುತ್ತಿದ್ದಾರೆ ಎಂಬುದು ಸುಳ್ಳು. ಯೋಜನೆ ಅನುಷ್ಠಾನ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅದಕ್ಕೆ ನಮ್ಮ ಬೆಂಬಲವೂ ಇಲ್ಲ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸಲು ಯೋಜನೆ ರೂಪಿಸಿದವರು ಯಾರೋ ನನಗೆ ಗೊತ್ತಿಲ್ಲ. ಯಾವುದೇ ಕಾರಣಕ್ಕೂ ಇಲ್ಲಿಯ ನೀರನ್ನು ಬೆಂಗಳೂರಿಗೆ ಹರಿಯಲು ಬಿಡುವುದಿಲ್ಲ. ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವುದು ತಮಾಷೆಯ ಮಾತಲ್ಲ. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಾಣದ ಸಮಯದಲ್ಲಿ ಆದ ಮುಳುಗಡೆ ಸಂತ್ರಸ್ತರ ಪುನರ್ವಸತಿ‌ ಸಮಸ್ಯೆಗಳಿಗೇ ಇನ್ನೂ ಪರಿಹಾರ ದೊರೆತಿಲ್ಲ. ಹೀಗಾಗಿ ಹೊಸ ಯೋಜನೆಗಳು ಕಾರ್ಯಸಾಧುವೂ ಅಲ್ಲ’ ಎಂದು ಅಭಿಪ್ರಾಯಪಟ್ಟರು.

ತಲಕಾವೇರಿಯನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿ ಶರಾವತಿ ಉಗಮ ಸ್ಥಾನ ಅಂಬುತೀರ್ಥವನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT