ಅರಣ್ಯ ಇಲಾಖೆಯಿಂದ ಸಾಗಾಣೆ ಮತ್ತು ಮಾರಾಟಕ್ಕೆ ಅವಕಾಶವಿಲ್ಲದರ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರಕಾಶ್ ಮಂಚಾಲೆ ರೈತರಿಗೆ ಸಮರ್ಪಕ ಮಾಹಿತಿ, ಹವಾಮಾನ ಆಧಾರಿತ ಬೆಳೆಗಳ ಅಭಿವೃದ್ಧಿ, ಗಿಡಗಳ ಕೊರತೆ, ಪಹಣಿಯಲ್ಲಿ ಬೆಳೆದ ಬೆಳೆಯ ನಮೂದೀಕರಣ, ಖರೀದಿ ಕೇಂದ್ರ ಹಾಗೂ ಸಂಸ್ಕರಣಾ ಘಟಕಗಳನ್ನು ನಿರ್ಮಿಸಿದರೆ ರೈತರು ಆದಾಯವನ್ನು ಹೆಚ್ಚಿಸಿಕೊಳ್ಳಬಹುದು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ರೈತರಿಗೆ ಇಂತಹ ಅಂಶಗಳನ್ನು ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ನೆಡೆಸಿದರೆ ಮಾತ್ರ ಮಿಶ್ರ ಬೆಳೆಯಾಗಿ ಔಷಧ ಸಸ್ಯಗಳನ್ನು ಬೆಳೆಯಲು ಸಹಕಾರಿಯಾಗುತ್ತದೆ ಎಂದರು.