<p><strong>ಹೊಸನಗರ:</strong> ‘ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಇನ್ನು ಸರ್ಕಾರದಿಂದ ಅಧಿಕೃತ ದಿನಾಂಕ ನಿಗದಿಯಾಗಿಲ್ಲ’ ಎಂದು ಹೊಸನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ಹೂವಿನಕೊಣೆ ಹೇಳಿದರು.</p>.<p>ಜೀವಿತ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ತಾಲ್ಲೂಕಿನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಪಷ್ಟನೆ ನೀಡಿದರು.</p>.<p>‘ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಮೃತಪಟ್ಟವರ ಖಾತೆಗೆ ಹಣ ಜಮಾ ಆಗುವುದನ್ನು ತಡೆಯಲು ಮತ್ತು ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸಲು ಸರ್ಕಾರ ಈ ಹೊಸ ನಿಯಮ ಜಾರಿಗೆ ತರುತ್ತಿದೆ. ಆದರೆ ಅರ್ಜಿ ಸಲ್ಲಿಕೆಗೆ ಅಧಿಕೃತ ದಿನಾಂಕವನ್ನು ಇನ್ನು ನಿಗದಿಪಡಿಸಿಲ್ಲ ನಿಗದಿಯಾದ ಬಳಿಕ ಪ್ರತಿಯೊಬ್ಬ ಗೃಹಲಕ್ಷ್ಮಿ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಯಾವುದೇ ಫಲಾನುಭವಿಗಳು ಗೊಂದಲಕ್ಕೆ ಒಳಗಾಗಬಾರದು’ ಎಂದು ತಿಳಿಸಿದರು.</p>.<p>ಅಲ್ಲದೆ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಪಂಚ ಗ್ಯಾರಂಟಿಗಳನ್ನು ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪಿಸುವ ದೃಷ್ಟಿಯಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಬ್ಬ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದು ಸಮಿತಿಯ ಸದಸ್ಯರಿಗೆ ಅವರ ಕಾರ್ಯ ವ್ಯಾಪ್ತಿಗೆ ಹೊಂದಿಕೆಯಾಗುವಂತೆ ಗ್ರಾಮ ಪಂಚಾಯಿತಿಗಳ ಜವಾಬ್ದಾರಿಯನ್ನು ವಹಿಸಿದರು.</p>.<p>‘ಸರ್ಕಾರದಿಂದ ನೀಡಲಾದ ಪಡಿತರಗಳನ್ನು ಸಂಗ್ರಹಿಸಿಡುವ ಗೋದಾಮಗಳಲ್ಲಿ ಸ್ವಚ್ಛತೆಯ ಕೊರತೆ ಹೆಚ್ಚಿದ್ದು ಈ ಬಗ್ಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಪ್ರತಿ ಗೋದಾಮುಗಳನ್ನು ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮವನ್ನು ಜರುಗಿಸುವಂತೆ’ ಸೂಚಿಸಿದರು.</p>.<p>‘ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಅಧಿಕಾರಿಯು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ನಿರ್ವಹಿಸುತ್ತಿರುವ ಕೆಲಸಗಳ ಕುರಿತು ಸಭೆಗೆ ಪ್ರತಿ ಬಾರಿಯೂ ಮಾಹಿತಿಯನ್ನು ನೀಡುವಂತೆ’ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ನರೇಂದ್ರ ಕುಮಾರ್ ಸಮಿತಿಯ ಸದಸ್ಯರಾದ ನರಸಿಂಹ ಪೂಜಾರಿ, ಸಿಂಥಿಯ ಸೆರವೊ, ಸುಮಂಗಲ ದೇವರಾಜ್, ಅಕ್ಷತಾ ನಾಗರಾಜ್, ಪೂರ್ಣಿಮಾ, ಸಂತೋಷ್ ಮಳವಳ್ಳಿ, ಅನಿಲ್ ಕುಮಾರ್, ಎನ್. ಟಿ. ಕರುಣಾಕರ, ಅಮೀರ್ ಹಂಜಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ‘ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಇನ್ನು ಸರ್ಕಾರದಿಂದ ಅಧಿಕೃತ ದಿನಾಂಕ ನಿಗದಿಯಾಗಿಲ್ಲ’ ಎಂದು ಹೊಸನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ಹೂವಿನಕೊಣೆ ಹೇಳಿದರು.</p>.<p>ಜೀವಿತ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ತಾಲ್ಲೂಕಿನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಪಷ್ಟನೆ ನೀಡಿದರು.</p>.<p>‘ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಮೃತಪಟ್ಟವರ ಖಾತೆಗೆ ಹಣ ಜಮಾ ಆಗುವುದನ್ನು ತಡೆಯಲು ಮತ್ತು ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸಲು ಸರ್ಕಾರ ಈ ಹೊಸ ನಿಯಮ ಜಾರಿಗೆ ತರುತ್ತಿದೆ. ಆದರೆ ಅರ್ಜಿ ಸಲ್ಲಿಕೆಗೆ ಅಧಿಕೃತ ದಿನಾಂಕವನ್ನು ಇನ್ನು ನಿಗದಿಪಡಿಸಿಲ್ಲ ನಿಗದಿಯಾದ ಬಳಿಕ ಪ್ರತಿಯೊಬ್ಬ ಗೃಹಲಕ್ಷ್ಮಿ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಯಾವುದೇ ಫಲಾನುಭವಿಗಳು ಗೊಂದಲಕ್ಕೆ ಒಳಗಾಗಬಾರದು’ ಎಂದು ತಿಳಿಸಿದರು.</p>.<p>ಅಲ್ಲದೆ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಪಂಚ ಗ್ಯಾರಂಟಿಗಳನ್ನು ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪಿಸುವ ದೃಷ್ಟಿಯಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಬ್ಬ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದು ಸಮಿತಿಯ ಸದಸ್ಯರಿಗೆ ಅವರ ಕಾರ್ಯ ವ್ಯಾಪ್ತಿಗೆ ಹೊಂದಿಕೆಯಾಗುವಂತೆ ಗ್ರಾಮ ಪಂಚಾಯಿತಿಗಳ ಜವಾಬ್ದಾರಿಯನ್ನು ವಹಿಸಿದರು.</p>.<p>‘ಸರ್ಕಾರದಿಂದ ನೀಡಲಾದ ಪಡಿತರಗಳನ್ನು ಸಂಗ್ರಹಿಸಿಡುವ ಗೋದಾಮಗಳಲ್ಲಿ ಸ್ವಚ್ಛತೆಯ ಕೊರತೆ ಹೆಚ್ಚಿದ್ದು ಈ ಬಗ್ಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಪ್ರತಿ ಗೋದಾಮುಗಳನ್ನು ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮವನ್ನು ಜರುಗಿಸುವಂತೆ’ ಸೂಚಿಸಿದರು.</p>.<p>‘ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಅಧಿಕಾರಿಯು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ನಿರ್ವಹಿಸುತ್ತಿರುವ ಕೆಲಸಗಳ ಕುರಿತು ಸಭೆಗೆ ಪ್ರತಿ ಬಾರಿಯೂ ಮಾಹಿತಿಯನ್ನು ನೀಡುವಂತೆ’ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ನರೇಂದ್ರ ಕುಮಾರ್ ಸಮಿತಿಯ ಸದಸ್ಯರಾದ ನರಸಿಂಹ ಪೂಜಾರಿ, ಸಿಂಥಿಯ ಸೆರವೊ, ಸುಮಂಗಲ ದೇವರಾಜ್, ಅಕ್ಷತಾ ನಾಗರಾಜ್, ಪೂರ್ಣಿಮಾ, ಸಂತೋಷ್ ಮಳವಳ್ಳಿ, ಅನಿಲ್ ಕುಮಾರ್, ಎನ್. ಟಿ. ಕರುಣಾಕರ, ಅಮೀರ್ ಹಂಜಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>