<p><strong>ಶಿವಮೊಗ್ಗ</strong>: ‘ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಬದುಕಿನಲ್ಲಿ ಮಂದಹಾಸ ಮೂಡಿಸುವುದರ ಜೊತೆಗೆ ಆರ್ಥಿಕ ಸ್ವಾವಲಂಬನೆಯನ್ನು ನೀಡಿದೆ’ ಎಂದು ಗ್ಯಾರಂಟಿ ಯೋಜನೆಗಳ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಎಂ. ಮಧು ತಿಳಿಸಿದರು. </p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p>.<p>ಜಿಲ್ಲೆಯಲ್ಲಿ 5 ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು, ಬಡವರ ಆಶಾಕಿರಣವಾಗಿರುವ ಅನ್ನಭಾಗ್ಯ ಯೋಜನೆಯು ಆಸರೆಯಾಗಿದೆ. ಹಸಿವು ಮುಕ್ತ ಭಾರತ ಮತ್ತು ‘ಸುಸ್ಥಿರ ಅಭಿವೃದ್ಧಿ ಗುರಿ-2030’ ತಲುಪಲು ಸಹಕಾರಿಯಾಗಿದೆ ಎಂದರು.</p>.<p>ಗೃಹಲಕ್ಷಿ ಯೋಜನೆಯ ಹಣವು 2025ರ ಜೂನ್ ತಿಂಗಳವರೆಗೆ ಬಿಡುಗಡೆಯಾಗಿದೆ. 2,044 ಐಟಿ, ಜಿಎಸ್ಟಿ ಫಲಾನುಭವಿಗಳು ಇದ್ದು, 298 ಮರಣ ಹೊಂದಿರುವ ಫಲಾನುಭವಿಗಳನ್ನು ಗುರುತಿಸಲಾಗಿದೆ. ಎನ್ಪಿಸಿಐ ಸಮಸ್ಯೆಯಿರುವ 90 ಫಲಾನುಭವಿಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಿಡಿಪಿಒ ಗಂಗೂಬಾಯಿ ತಿಳಿಸಿದರು. </p>.<p>ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾರಾ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರು ಇದ್ದರು. </p>.<p><strong>ಯುವನಿಧಿ: ₹1.95 ಕೋಟಿ ಜಮೆ </strong></p><p> ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ₹1.95 ಕೋಟಿ ಹಣ ಜಮೆಯಾಗಿದೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಜೂನ್ ತಿಂಗಳವರೆಗೆ ₹59.71 ಲಕ್ಷ ಜಮೆಯಾಗಿದೆ. ಶಕ್ತಿ ಯೋಜನೆಯಡಿ ಶಿವಮೊಗ್ಗ ತಾಲ್ಲೂಕಿನಲ್ಲಿ 20.76 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಸಾರಿಗೆ ಇಲಾಖೆಗೆ ಶೇ 37 ರಷ್ಟು ಅಂದರೆ ₹73.28 ಕೋಟಿ ಆದಾಯ ದೊರೆತಿದೆ ಎಂದು ಸಿಡಿಪಿಒ ಗಂಗೂಬಾಯಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಬದುಕಿನಲ್ಲಿ ಮಂದಹಾಸ ಮೂಡಿಸುವುದರ ಜೊತೆಗೆ ಆರ್ಥಿಕ ಸ್ವಾವಲಂಬನೆಯನ್ನು ನೀಡಿದೆ’ ಎಂದು ಗ್ಯಾರಂಟಿ ಯೋಜನೆಗಳ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಎಂ. ಮಧು ತಿಳಿಸಿದರು. </p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p>.<p>ಜಿಲ್ಲೆಯಲ್ಲಿ 5 ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು, ಬಡವರ ಆಶಾಕಿರಣವಾಗಿರುವ ಅನ್ನಭಾಗ್ಯ ಯೋಜನೆಯು ಆಸರೆಯಾಗಿದೆ. ಹಸಿವು ಮುಕ್ತ ಭಾರತ ಮತ್ತು ‘ಸುಸ್ಥಿರ ಅಭಿವೃದ್ಧಿ ಗುರಿ-2030’ ತಲುಪಲು ಸಹಕಾರಿಯಾಗಿದೆ ಎಂದರು.</p>.<p>ಗೃಹಲಕ್ಷಿ ಯೋಜನೆಯ ಹಣವು 2025ರ ಜೂನ್ ತಿಂಗಳವರೆಗೆ ಬಿಡುಗಡೆಯಾಗಿದೆ. 2,044 ಐಟಿ, ಜಿಎಸ್ಟಿ ಫಲಾನುಭವಿಗಳು ಇದ್ದು, 298 ಮರಣ ಹೊಂದಿರುವ ಫಲಾನುಭವಿಗಳನ್ನು ಗುರುತಿಸಲಾಗಿದೆ. ಎನ್ಪಿಸಿಐ ಸಮಸ್ಯೆಯಿರುವ 90 ಫಲಾನುಭವಿಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಿಡಿಪಿಒ ಗಂಗೂಬಾಯಿ ತಿಳಿಸಿದರು. </p>.<p>ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾರಾ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರು ಇದ್ದರು. </p>.<p><strong>ಯುವನಿಧಿ: ₹1.95 ಕೋಟಿ ಜಮೆ </strong></p><p> ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ₹1.95 ಕೋಟಿ ಹಣ ಜಮೆಯಾಗಿದೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಜೂನ್ ತಿಂಗಳವರೆಗೆ ₹59.71 ಲಕ್ಷ ಜಮೆಯಾಗಿದೆ. ಶಕ್ತಿ ಯೋಜನೆಯಡಿ ಶಿವಮೊಗ್ಗ ತಾಲ್ಲೂಕಿನಲ್ಲಿ 20.76 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಸಾರಿಗೆ ಇಲಾಖೆಗೆ ಶೇ 37 ರಷ್ಟು ಅಂದರೆ ₹73.28 ಕೋಟಿ ಆದಾಯ ದೊರೆತಿದೆ ಎಂದು ಸಿಡಿಪಿಒ ಗಂಗೂಬಾಯಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>