<p>ಶಿವಮೊಗ್ಗ: ‘ಅತಿಥಿ ಉಪನ್ಯಾಸಕರ ಉದ್ಯೋಗ ಹಕ್ಕು ಸಂರಕ್ಷಿಸಬೇಕು. ಉಪನ್ಯಾಸಕರನ್ನು ವೃತ್ತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು’ ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಸೋಮಶೇಖರ ಎಚ್. ಶಿಮೊಗ್ಗಿ ಒತ್ತಾಯಿಸಿದರು.</p>.<p>ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. </p>.<p>ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ವಿದ್ಯಾರ್ಹತೆ ಪಡೆಯದ 5,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಸಂಕಷ್ಟದಲ್ಲಿದ್ದಾರೆ. ದಶಕಗಳಿಂದ ಸಲ್ಲಿಸಿದ ಅನುಭವವನ್ನೇ ಆಧಾರವಾಗಿ ಪರಿಗಣಿಸಿ ಸೇವೆಯಲ್ಲಿ ಮುಂದುವರೆಯಲು ಸರ್ಕಾರ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. </p>.<p>ನೂತನ ನೇಮಕಾತಿ, ವರ್ಗಾವಣೆ ಮತ್ತು ಕಾರ್ಯಭಾರದ ಕೊರತೆಯಿಂದ ಹೊರಗುಳಿದ ಅತಿಥಿ ಉಪನ್ಯಾಸಕರನ್ನು ಸೇವಾ ಜೇಷ್ಠತೆಯ ಆಧಾರದ ಮೇಲೆ ಈ ಕೂಡಲೇ ಹೆಚ್ಚುವರಿ ಬೋಧನಾ ಕಾರ್ಯಕ್ಕೆ ನೇಮಕಾತಿ ನಡೆಸಬೇಕೆಂದು ಆಗ್ರಹಿಸಿದರು.</p>.<p>ಡಿಎಸ್ಎಸ್ ಸಂಚಾಲಕ ಟಿ.ಎಚ್.ಹಾಲೇಶಪ್ಪ, ಅಹಿಂದ ಜಾಗೃತ ವೇದಿಕೆಯ ಜಿಲ್ಲಾ ಘಟಕ ಅಧ್ಯಕ್ಷ ನಟರಾಜ್, ಪ್ರಮುಖರಾದ ರಾಚಪ್ಪ, ಶಿವಕುಮಾರ್, ವಿ. ಧನಂಜಯಪ್ಪ, ಗಣಪತಿ, ಚಂದ್ರಪ್ಪ, ಸಂಗಯ್ಯ, ಅನಂತಕುಮಾರ್, ಸತೀಶ್, ಮಲ್ಲಿಕಾರ್ಜುನ್, ವಸಂತ್ ಕುಮಾರ್, ರೂಪಾ, ದೀಪಾ, ಸುಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಅತಿಥಿ ಉಪನ್ಯಾಸಕರ ಉದ್ಯೋಗ ಹಕ್ಕು ಸಂರಕ್ಷಿಸಬೇಕು. ಉಪನ್ಯಾಸಕರನ್ನು ವೃತ್ತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು’ ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಸೋಮಶೇಖರ ಎಚ್. ಶಿಮೊಗ್ಗಿ ಒತ್ತಾಯಿಸಿದರು.</p>.<p>ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. </p>.<p>ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ವಿದ್ಯಾರ್ಹತೆ ಪಡೆಯದ 5,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಸಂಕಷ್ಟದಲ್ಲಿದ್ದಾರೆ. ದಶಕಗಳಿಂದ ಸಲ್ಲಿಸಿದ ಅನುಭವವನ್ನೇ ಆಧಾರವಾಗಿ ಪರಿಗಣಿಸಿ ಸೇವೆಯಲ್ಲಿ ಮುಂದುವರೆಯಲು ಸರ್ಕಾರ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. </p>.<p>ನೂತನ ನೇಮಕಾತಿ, ವರ್ಗಾವಣೆ ಮತ್ತು ಕಾರ್ಯಭಾರದ ಕೊರತೆಯಿಂದ ಹೊರಗುಳಿದ ಅತಿಥಿ ಉಪನ್ಯಾಸಕರನ್ನು ಸೇವಾ ಜೇಷ್ಠತೆಯ ಆಧಾರದ ಮೇಲೆ ಈ ಕೂಡಲೇ ಹೆಚ್ಚುವರಿ ಬೋಧನಾ ಕಾರ್ಯಕ್ಕೆ ನೇಮಕಾತಿ ನಡೆಸಬೇಕೆಂದು ಆಗ್ರಹಿಸಿದರು.</p>.<p>ಡಿಎಸ್ಎಸ್ ಸಂಚಾಲಕ ಟಿ.ಎಚ್.ಹಾಲೇಶಪ್ಪ, ಅಹಿಂದ ಜಾಗೃತ ವೇದಿಕೆಯ ಜಿಲ್ಲಾ ಘಟಕ ಅಧ್ಯಕ್ಷ ನಟರಾಜ್, ಪ್ರಮುಖರಾದ ರಾಚಪ್ಪ, ಶಿವಕುಮಾರ್, ವಿ. ಧನಂಜಯಪ್ಪ, ಗಣಪತಿ, ಚಂದ್ರಪ್ಪ, ಸಂಗಯ್ಯ, ಅನಂತಕುಮಾರ್, ಸತೀಶ್, ಮಲ್ಲಿಕಾರ್ಜುನ್, ವಸಂತ್ ಕುಮಾರ್, ರೂಪಾ, ದೀಪಾ, ಸುಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>