<p><strong>ರಿಪ್ಪನ್ ಪೇಟೆ</strong>: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದ ಗ್ರಾಮೀಣ ಪ್ರತಿಭೆ ಕವನಶ್ರೀ ಎಚ್.ಎಂ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪುಸ್ತಕದಲ್ಲಿ ತಮ್ಮ ಹೆಸರನ್ನು ದಾಖಲಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.</p>.<p>ಕವನಶ್ರೀ ಪ್ರಸ್ತುತ ಫ್ಯಾಷನ್ ಉಡುಪು ವಿನ್ಯಾಸದಲ್ಲಿ ಎಂ.ಎಸ್ಸಿ ಅಧ್ಯಯನ ಮಾಡುತ್ತಿದ್ದು ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್ಗಳನ್ನು ತಯಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.</p>.<p>ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಕವನಶ್ರೀ, ತಮ್ಮ ನೈಪುಣ್ಯ ಮತ್ತು ಕೌಶಲದಿಂದ ಅಂತರರಾಷ್ಟ್ರೀಯ ಮಾನ್ಯತೆ ಪಡೆದು ಅರಸಾಳು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.</p>.<p>ನಾಲ್ಕು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ನಿಧನರಾದ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜಯ್ಯ ಟಿ. ಹಾಗೂ ಅರಸಾಳು ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾವತಿ ಅವರ ಪುತ್ರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ ಪೇಟೆ</strong>: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದ ಗ್ರಾಮೀಣ ಪ್ರತಿಭೆ ಕವನಶ್ರೀ ಎಚ್.ಎಂ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪುಸ್ತಕದಲ್ಲಿ ತಮ್ಮ ಹೆಸರನ್ನು ದಾಖಲಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.</p>.<p>ಕವನಶ್ರೀ ಪ್ರಸ್ತುತ ಫ್ಯಾಷನ್ ಉಡುಪು ವಿನ್ಯಾಸದಲ್ಲಿ ಎಂ.ಎಸ್ಸಿ ಅಧ್ಯಯನ ಮಾಡುತ್ತಿದ್ದು ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್ಗಳನ್ನು ತಯಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.</p>.<p>ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಕವನಶ್ರೀ, ತಮ್ಮ ನೈಪುಣ್ಯ ಮತ್ತು ಕೌಶಲದಿಂದ ಅಂತರರಾಷ್ಟ್ರೀಯ ಮಾನ್ಯತೆ ಪಡೆದು ಅರಸಾಳು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.</p>.<p>ನಾಲ್ಕು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ನಿಧನರಾದ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜಯ್ಯ ಟಿ. ಹಾಗೂ ಅರಸಾಳು ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾವತಿ ಅವರ ಪುತ್ರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>