<p><strong>ಸಾಗರ:</strong> ಈ ಭಾಗದಲ್ಲಿ ಶಾಸ್ತ್ರೀಯ ನೃತ್ಯ ತರಬೇತಿ ಸಂಸ್ಥೆಯನ್ನು ಸಕ್ರಿಯವಾಗಿ ನಡೆಸುವ ಮೂಲಕ ಗುರು ಶಿಷ್ಯ ಪರಂಪರೆಯನ್ನು ಪುನರುತ್ಥಾನಗೊಳಿಸುವಲ್ಲಿ ನಾಟ್ಯತರಂಗ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ಇಲ್ಲಿನ ಶ್ರೀನಗರ ಬಡಾವಣೆಯ ನೃತ್ಯಭಾಸ್ಕರ ಸಭಾಂಗಣದಲ್ಲಿ ನಾಟ್ಯತರಂಗ ಸಂಸ್ಥೆ ಈಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಸಂಸ್ಕೃತಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಸ್ಥಾಪಕರಾದ ವಿದ್ವಾನ್ ಜಿ.ಬಿ.ಜನಾರ್ಧನ್ ದಂಪತಿಯನ್ನು ಸನ್ಮಾನಿಸಿ ಮಾತನಾಡಿದರು.</p>.<p>ನಾಟ್ಯತರಂಗ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ವಿದ್ಯಾರ್ಥಿಗಳ ದೇಹಭಾಷೆಯಲ್ಲಿ ಗುರು–ಶಿಷ್ಯ ಪರಂಪರೆಯ ಚಹರೆ ಇರುವುದನ್ನು ಮೇಲ್ನೋಟಕ್ಕೆ ಗುರುತಿಸಬಹುದು. ಈ ಮೂಲಕ ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಮೃದ್ಧಗೊಳಿಸುವ ಕಾರ್ಯದಲ್ಲಿ ನಾಟ್ಯತರಂಗ ಸಂಸ್ಥೆ ಭಾಗಿಯಾಗಿರುವುದು ಗಮನಾರ್ಹ ಸಂಗತಿಯಾಗಿದೆ ಎಂದರು.</p>.<p>1992ರಿಂದ ನೃತ್ಯ ತರಬೇತಿ ಶಾಲೆಯನ್ನು ನಿರಂತರವಾಗಿ ನಡೆಸುತ್ತಿರುವ ನೃತ್ಯಗುರು ವಿದ್ವಾನ್ ಜಿ.ಬಿ.ಜನಾರ್ಧನ್ ಅವರ ಸಾಧನೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಬಂಧ ಈ ಭಾಗದ ಜನರು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೋಟೆಲ್ ಮಾಲಿಕರ ಸಂಘದ ಪ್ರಮುಖರಾದ ಎಚ್.ಎನ್. ಉಮೇಶ್ ಹೇಳಿದರು.</p>.<p>ಕಲಾ ಪೋಷಕಿ ಶ್ಯಾಮಲಾ ರವಿಹೆಗಡೆ, ಐ.ವಿ.ಹೆಗಡೆ, ಜಯಂತಿ ಸುಬ್ಬಣ್ಣ ಇದ್ದರು. ಪ್ರಣೀತ್ ಪ್ರಾರ್ಥಿಸಿದರು. ಆರಭಿ ಐತುಮನೆ ಸ್ವಾಗತಿಸಿದರು. ವಿದುಷಿ ರಾಜಲಕ್ಷ್ಮಿ ಕಾನುಗೋಡು ಅವರಿಂದ ಭರತನಾಟ್ಯ, ಜನಾರ್ಧನ್ ಸಂಗಡಿಗರಿಂದ ‘ನಳ ದಮಯಂತಿ’ ನೃತ್ಯರೂಪಕ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಈ ಭಾಗದಲ್ಲಿ ಶಾಸ್ತ್ರೀಯ ನೃತ್ಯ ತರಬೇತಿ ಸಂಸ್ಥೆಯನ್ನು ಸಕ್ರಿಯವಾಗಿ ನಡೆಸುವ ಮೂಲಕ ಗುರು ಶಿಷ್ಯ ಪರಂಪರೆಯನ್ನು ಪುನರುತ್ಥಾನಗೊಳಿಸುವಲ್ಲಿ ನಾಟ್ಯತರಂಗ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ಇಲ್ಲಿನ ಶ್ರೀನಗರ ಬಡಾವಣೆಯ ನೃತ್ಯಭಾಸ್ಕರ ಸಭಾಂಗಣದಲ್ಲಿ ನಾಟ್ಯತರಂಗ ಸಂಸ್ಥೆ ಈಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಸಂಸ್ಕೃತಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಸ್ಥಾಪಕರಾದ ವಿದ್ವಾನ್ ಜಿ.ಬಿ.ಜನಾರ್ಧನ್ ದಂಪತಿಯನ್ನು ಸನ್ಮಾನಿಸಿ ಮಾತನಾಡಿದರು.</p>.<p>ನಾಟ್ಯತರಂಗ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ವಿದ್ಯಾರ್ಥಿಗಳ ದೇಹಭಾಷೆಯಲ್ಲಿ ಗುರು–ಶಿಷ್ಯ ಪರಂಪರೆಯ ಚಹರೆ ಇರುವುದನ್ನು ಮೇಲ್ನೋಟಕ್ಕೆ ಗುರುತಿಸಬಹುದು. ಈ ಮೂಲಕ ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಮೃದ್ಧಗೊಳಿಸುವ ಕಾರ್ಯದಲ್ಲಿ ನಾಟ್ಯತರಂಗ ಸಂಸ್ಥೆ ಭಾಗಿಯಾಗಿರುವುದು ಗಮನಾರ್ಹ ಸಂಗತಿಯಾಗಿದೆ ಎಂದರು.</p>.<p>1992ರಿಂದ ನೃತ್ಯ ತರಬೇತಿ ಶಾಲೆಯನ್ನು ನಿರಂತರವಾಗಿ ನಡೆಸುತ್ತಿರುವ ನೃತ್ಯಗುರು ವಿದ್ವಾನ್ ಜಿ.ಬಿ.ಜನಾರ್ಧನ್ ಅವರ ಸಾಧನೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಬಂಧ ಈ ಭಾಗದ ಜನರು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೋಟೆಲ್ ಮಾಲಿಕರ ಸಂಘದ ಪ್ರಮುಖರಾದ ಎಚ್.ಎನ್. ಉಮೇಶ್ ಹೇಳಿದರು.</p>.<p>ಕಲಾ ಪೋಷಕಿ ಶ್ಯಾಮಲಾ ರವಿಹೆಗಡೆ, ಐ.ವಿ.ಹೆಗಡೆ, ಜಯಂತಿ ಸುಬ್ಬಣ್ಣ ಇದ್ದರು. ಪ್ರಣೀತ್ ಪ್ರಾರ್ಥಿಸಿದರು. ಆರಭಿ ಐತುಮನೆ ಸ್ವಾಗತಿಸಿದರು. ವಿದುಷಿ ರಾಜಲಕ್ಷ್ಮಿ ಕಾನುಗೋಡು ಅವರಿಂದ ಭರತನಾಟ್ಯ, ಜನಾರ್ಧನ್ ಸಂಗಡಿಗರಿಂದ ‘ನಳ ದಮಯಂತಿ’ ನೃತ್ಯರೂಪಕ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>