‘ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡಜನರು ಹಸಿವಿನಿಂದ ಬಳಲಬಾರದು ಎಂದು ಪಡಿತರ ಅಕ್ಕಿಯನ್ನು ಉಚಿತವಾಗಿ ಕೊಡುತ್ತಿದೆ. ಆದರೆ ನಮ್ಮ ಮನೆಯಲ್ಲಿ ಸುಮಾರು ಒಂದು ಕ್ವಿಂಟಲ್ ಪಡಿತರ ಅಕ್ಕಿಯನ್ನು ಬಡವರಿಗೆ ಕೊಡಲು ಸಂಗ್ರಹಿಸಿ ಇಡಲಾಗಿತ್ತು. ಆದರೆ ನನ್ನ ಪತ್ನಿ ನನಗೆ ಗೊತ್ತಿಲ್ಲದೆ ಅಕ್ಕಿಯನ್ನು ಕಾಳಸಂತೆಕೋರರಿಗೆ ಮಾರಾಟ ಮಾಡಿದ್ದಾರೆ. ಇದರಿಂದ ನನಗೆ ಬೇಸರವಾಗಿದೆ. ಈ ಕಾರಣ ಅರೆಬೆತ್ತಲೆಯಾಗಿ 20 ಕಿ.ಮೀ. ಪಾದಯಾತ್ರೆ ನಡೆಸಿ ನನ್ನ ಪಡಿತರ ಚೀಟಿಯನ್ನು ರದ್ದುಮಾಡುವಂತೆ ಮನವಿ ಮಾಡಿದ್ದೇನೆ. ಜೊತೆಗೆ ತಾಲ್ಲೂಕಿನ ಬೇರೆಬೇರೆ ಭಾಗದಲ್ಲಿ ಇಂತಹ ಅವ್ಯವಹಾರ ನಡೆಯುತ್ತಿದೆ. ಅಗತ್ಯ ಇಲ್ಲದವರ ಪಡಿತರ ಚೀಟಿಯನ್ನು ರದ್ದುಮಾಡಬೇಕು. ಪಡಿತರ ಅಕ್ಕಿಯನ್ನು ಖರೀದಿ ಮಾಡುವ ರೈಸ್ಮಿಲ್, ಅಂಗಡಿಯವರ ಮೇಲೆ ಕ್ರಮ ಜರುಗಿಸಬೇಕು’ ಎಂದು ಸ್ವಾಮಿನಾಥ್ ಒತ್ತಾಯಿಸಿದರು.