<p><strong>ಸಾಗರ:</strong> ಶಿಕ್ಷಣ ಕ್ರಮದಲ್ಲಿ ಯೋಗಾಸನವನ್ನು ಅಳವಡಿಸುವತ್ತ ಚಿಂತನೆ ನಡೆಸುವ ಅಗತ್ಯವಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ಇಲ್ಲಿನ ವನಶ್ರೀ ವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವನಶ್ರೀ ಜಲಯೋಗ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ, ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಥಮಿಕ ಶಿಕ್ಷಣ ಹಂತದಿಂದಲೆ ಮಕ್ಕಳು ಯೋಗಾಸನದ ಅಭ್ಯಾಸದಲ್ಲಿ ತೊಡಗುವುದರಿಂದ ಅವರ ಮಾನಸಿಕ, ದೈಹಿಕ ಆರೋಗ್ಯದಲ್ಲಿ ಸದೃಢತೆ ಕಾಣಬಹುದು. ಅಲ್ಲದೆ ಮಕ್ಕಳಲ್ಲಿ ಯೋಗದ ಅಭ್ಯಾಸದಿಂದ ಏಕಾಗ್ರತೆ ಲಭ್ಯವಾಗುತ್ತದೆ ಎಂದು ಹೇಳಿದರು.</p>.<p>ವನಶ್ರೀ ಶಿಕ್ಷಣ ಸಂಸ್ಥೆ ತನ್ನ ಆರಂಭದ ದಿನದಿಂದಲೂ ಯೋಗಾಸನಕ್ಕೆ, ಗುರುಕುಲ ಮಾದರಿಯ ಶಿಕ್ಷಣಕ್ಕೆ ಒತ್ತು ನೀಡುತ್ತ ಬಂದಿರುವುದು ಗಮನಿಸಬೇಕಾದ ಸಂಗತಿ. ಇಲ್ಲಿ ಹೊರರಾಜ್ಯದ ಮಕ್ಕಳು ಕೂಡ ಓದುತ್ತಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಹಾಗೂ ದಾನಿಗಳ ನೆರವಿನ ಅಗತ್ಯವಿದೆ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವನಶ್ರೀ ಸಂಸ್ಥಾಪಕ ಎಚ್.ಪಿ. ಮಂಜಪ್ಪ, ನಮ್ಮ ಸಂಸ್ಥೆಯಲ್ಲಿ ಈವರೆಗೆ ಯೋಗಾಸನವು ಶಿಕ್ಷಣದ ಒಂದು ಭಾಗವಾಗಿದ್ದು, ಇದೀಗ ಜಲಯೋಗ ಕೇಂದ್ರವನ್ನು ಕೂಡ ಆರಂಭಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.</p>.<p>ಹೊಸಗುಂದ ಉಮಾಮಹೇಶ್ವರ ಸೇವಾ ಟ್ರಸ್ಟ್ನ ಸಂಸ್ಥಾಪಕ ಸಿ.ಎಂ.ಎನ್. ಶಾಸ್ತ್ರಿ, ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್, ಯಡಜಿಗಳಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಹಕ್ರೆ, ಜಲಯೋಗ ತಜ್ಞ ಹರೀಶ್ ನವಾಥೆ, ಮಂಜು ನಾಯ್ಕ್, ತೇಜಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಶಿಕ್ಷಣ ಕ್ರಮದಲ್ಲಿ ಯೋಗಾಸನವನ್ನು ಅಳವಡಿಸುವತ್ತ ಚಿಂತನೆ ನಡೆಸುವ ಅಗತ್ಯವಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ಇಲ್ಲಿನ ವನಶ್ರೀ ವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವನಶ್ರೀ ಜಲಯೋಗ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ, ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಥಮಿಕ ಶಿಕ್ಷಣ ಹಂತದಿಂದಲೆ ಮಕ್ಕಳು ಯೋಗಾಸನದ ಅಭ್ಯಾಸದಲ್ಲಿ ತೊಡಗುವುದರಿಂದ ಅವರ ಮಾನಸಿಕ, ದೈಹಿಕ ಆರೋಗ್ಯದಲ್ಲಿ ಸದೃಢತೆ ಕಾಣಬಹುದು. ಅಲ್ಲದೆ ಮಕ್ಕಳಲ್ಲಿ ಯೋಗದ ಅಭ್ಯಾಸದಿಂದ ಏಕಾಗ್ರತೆ ಲಭ್ಯವಾಗುತ್ತದೆ ಎಂದು ಹೇಳಿದರು.</p>.<p>ವನಶ್ರೀ ಶಿಕ್ಷಣ ಸಂಸ್ಥೆ ತನ್ನ ಆರಂಭದ ದಿನದಿಂದಲೂ ಯೋಗಾಸನಕ್ಕೆ, ಗುರುಕುಲ ಮಾದರಿಯ ಶಿಕ್ಷಣಕ್ಕೆ ಒತ್ತು ನೀಡುತ್ತ ಬಂದಿರುವುದು ಗಮನಿಸಬೇಕಾದ ಸಂಗತಿ. ಇಲ್ಲಿ ಹೊರರಾಜ್ಯದ ಮಕ್ಕಳು ಕೂಡ ಓದುತ್ತಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಹಾಗೂ ದಾನಿಗಳ ನೆರವಿನ ಅಗತ್ಯವಿದೆ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವನಶ್ರೀ ಸಂಸ್ಥಾಪಕ ಎಚ್.ಪಿ. ಮಂಜಪ್ಪ, ನಮ್ಮ ಸಂಸ್ಥೆಯಲ್ಲಿ ಈವರೆಗೆ ಯೋಗಾಸನವು ಶಿಕ್ಷಣದ ಒಂದು ಭಾಗವಾಗಿದ್ದು, ಇದೀಗ ಜಲಯೋಗ ಕೇಂದ್ರವನ್ನು ಕೂಡ ಆರಂಭಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.</p>.<p>ಹೊಸಗುಂದ ಉಮಾಮಹೇಶ್ವರ ಸೇವಾ ಟ್ರಸ್ಟ್ನ ಸಂಸ್ಥಾಪಕ ಸಿ.ಎಂ.ಎನ್. ಶಾಸ್ತ್ರಿ, ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್, ಯಡಜಿಗಳಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಹಕ್ರೆ, ಜಲಯೋಗ ತಜ್ಞ ಹರೀಶ್ ನವಾಥೆ, ಮಂಜು ನಾಯ್ಕ್, ತೇಜಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>