ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ ಆರೋಪ: ಸಾಧ್ವಿ ಪ್ರಜ್ಞಾ ಸಿಂಗ್ ವಿರುದ್ಧ ಕಾಂಗ್ರೆಸ್‌ ದೂರು

Last Updated 29 ಡಿಸೆಂಬರ್ 2022, 6:46 IST
ಅಕ್ಷರ ಗಾತ್ರ

ಶಿವಮೊಗ್ಗ: ದ್ವೇಷ ಭಾಷಣದ ಹಿನ್ನೆಲೆಯಲ್ಲಿ ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ವಿರುದ್ಧ ಎಐಸಿಸಿ ಮುಖಂಡ ತೆಹಸೀನ್ ಪೂನಾವಾಲಾ ಪರವಾಗಿ ಜಿಲ್ಲಾ ಕಾಂಗ್ರೆಸ್‌ನಿಂದ ಬುಧವಾರ ಸಂಜೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂದೂ ಜಾಗರಣ ವೇದಿಕೆಯು ಶಿವಮೊಗ್ಗದಲ್ಲಿ ಕಳೆದ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಭಾಷಣ ಮಾಡಿದ್ದರು.

ಮಾಧ್ಯಮಗಳ ವರದಿ ಆಧರಿಸಿ ತೆಹಸೀನ್ ಪೂನಾವಾಲಾ ಅವರು ಶಿವಮೊಗ್ಗ ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್ ಅವರಿಗೆ ಟ್ವಿಟರ್ ಮೂಲಕ ದೂರು ನೀಡಿದ್ದರು. ದ್ವೇಷ ಭಾಷಣದ ಕಾರಣ ಸಾದ್ವಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದ್ದರು.

ಟ್ವಿಟರ್ ಮೂಲಕ ದೂರು ನೀಡಿದಲ್ಲಿ ನಿಯಮಾವಳಿ ಅನ್ವಯ ಪರಿಗಣಿಸಲು ಸಾಧ್ಯವಿಲ್ಲ. ಖುದ್ದಾಗಿ ಬಂದು ದೂರು ದಾಖಲಿಸಬೇಕು ಎಂದು ಪೂನವಾಲಾ ಅವರಿಗೆ ತಿಳಿಸಲಾಗಿದೆ ಎಂದು ಎಸ್‌ಪಿ ಪ್ರತಿಕ್ರಿಯಿಸಿದ್ದರು.

‘ಪೂನಾವಾಲಾ ಶಿವಮೊಗ್ಗಕ್ಕೆ ಬರಲು ಸಾಧ್ಯವಾಗಿಲ್ಲ. ಅವರ ಪರವಾಗಿ ನಾವೇ ದೂರು ದಾಖಲಿಸಿದ್ದೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಸುಂದರೇಶ್ ತಿಳಿಸಿದರು.

ಈ ಮಧ್ಯೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಅವರೂ ಇ-ಮೇಲ್ ಮೂಲಕ ಸಾದ್ವಿ ಪ್ರಜ್ಞಾ ಸಿಂಗ್ ವಿರುದ್ಧ ಮಿಥುನ್‌ ಕುಮಾರ್‌ಗೆ ದೂರು ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT