ತಾಲ್ಲೂಕಿನ ಮಾರವಳ್ಳಿ ಗ್ರಾಮದಲ್ಲಿರುವ ಕಿಟ್ಟದ ಕೆರೆ ಭರ್ತಿಯಾಗಿದ್ದು, ರಸ್ತೆ ಮೇಲೆ ನೀರು ಹರಿದಿದೆ. ಬೇಗೂರು ಗ್ರಾಮದ ಹಿರೇಕೆರೆ ಭರ್ತಿಯಾಗಿ ಗ್ರಾಮದ ಮನೆಗಳಿಗೆ ಹಾಗೂ ಕೃಷಿ ಭೂಮಿಗೆ ನೀರು ನುಗ್ಗಿದೆ. ಅಂಜನಾಪುರ ಹಾಗೂ ಅಂಬ್ಲಿಗೊಳ್ಳ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಕೊಡಿ ಮೇಲೆ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ಕುಮದ್ವತಿ ನದಿ ನೀರು ಕೊಟ್ಟ ಗ್ರಾಮದ ಕೆಲ ಮನೆಗಳಿಗೆ ನುಗ್ಗಿದೆ.