<p><strong>ಶಿವಮೊಗ್ಗ: </strong>ನಗರದಲ್ಲಿ ಸಂಜೆ ಸುರಿದ ಮಳೆಗೆ ಮಿಳಘಟ್ಟದಲ್ಲಿ ಮನೆಯ ಮೇಲೆ ತೆಂಗಿನ ಮರ ಬಿದ್ದಿದೆ.</p>.<p>ರಾಜಣ್ಣ ಎಂಬುವವರ ಮನೆ ಮೇಲೆ ಮರ ಬಿದ್ದಿದ್ದರಿಂದ, ಮನೆಗೆ ಹಾನಿಯಾಗಿದೆ. ಇನ್ನು ವಿದ್ಯುತ್ ತಂತಿ ತುಂಡಾಗಿದ್ದರಿಂದ ವಿದ್ಯುತ್ ಸಂಪರ್ಕ ಕಡಿತವಾಗಿದೆ.</p>.<p>ಆನಂದಪುರದಲ್ಲಿ ಜೋರು ಮಳೆಯಾಗಿದ್ದು, ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಸಿಡಿಲು ಬಡಿದು<br />ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ.</p>.<p>ರಿಪ್ಪನ್ಪೇಟೆ ಸಾಗರ ರಸ್ತೆಯ ವಿನಾಯಕ ನಗರದಲ್ಲಿ ಬೃಹತ್ ಗಾತ್ರದ ಮರಬಿದ್ದು ಅಂಗಡಿ ಮಳಿಗೆಗೆ ಹಾನಿಯಾಗಿದೆ. ಸಾಗರ ತೀರ್ಥಹಳ್ಳಿ ಮಾರ್ಗದ ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆಯಾಯಿತು. ತಕ್ಷಣವೇ ನಾಗರಿಕರು, ರಕ್ಷಣಾ ಇಲಾಖೆಯ ಸಿಬ್ಬಂದಿ ಸೇರಿ ಮರ ತೆರವುಗೊಳಿಸಿದರು.</p>.<p>ಗೌತಮಪುರದಲ್ಲಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ರಿಪ್ಪನ್ಪೇಟೆ ಸುತ್ತಮುತ್ತ ಮಂಗಳವಾರ ಆಲಿಕಲ್ಲು ಮಳೆಯಾಗಿದೆ. ಜೋರು ಮಳೆ ಮತ್ತು ಗಾಳಿಯ ರಭಸಕ್ಕೆ ವಿವಿಧೆಡೆ ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ನಗರದಲ್ಲಿ ಸಂಜೆ ಸುರಿದ ಮಳೆಗೆ ಮಿಳಘಟ್ಟದಲ್ಲಿ ಮನೆಯ ಮೇಲೆ ತೆಂಗಿನ ಮರ ಬಿದ್ದಿದೆ.</p>.<p>ರಾಜಣ್ಣ ಎಂಬುವವರ ಮನೆ ಮೇಲೆ ಮರ ಬಿದ್ದಿದ್ದರಿಂದ, ಮನೆಗೆ ಹಾನಿಯಾಗಿದೆ. ಇನ್ನು ವಿದ್ಯುತ್ ತಂತಿ ತುಂಡಾಗಿದ್ದರಿಂದ ವಿದ್ಯುತ್ ಸಂಪರ್ಕ ಕಡಿತವಾಗಿದೆ.</p>.<p>ಆನಂದಪುರದಲ್ಲಿ ಜೋರು ಮಳೆಯಾಗಿದ್ದು, ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಸಿಡಿಲು ಬಡಿದು<br />ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ.</p>.<p>ರಿಪ್ಪನ್ಪೇಟೆ ಸಾಗರ ರಸ್ತೆಯ ವಿನಾಯಕ ನಗರದಲ್ಲಿ ಬೃಹತ್ ಗಾತ್ರದ ಮರಬಿದ್ದು ಅಂಗಡಿ ಮಳಿಗೆಗೆ ಹಾನಿಯಾಗಿದೆ. ಸಾಗರ ತೀರ್ಥಹಳ್ಳಿ ಮಾರ್ಗದ ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆಯಾಯಿತು. ತಕ್ಷಣವೇ ನಾಗರಿಕರು, ರಕ್ಷಣಾ ಇಲಾಖೆಯ ಸಿಬ್ಬಂದಿ ಸೇರಿ ಮರ ತೆರವುಗೊಳಿಸಿದರು.</p>.<p>ಗೌತಮಪುರದಲ್ಲಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ರಿಪ್ಪನ್ಪೇಟೆ ಸುತ್ತಮುತ್ತ ಮಂಗಳವಾರ ಆಲಿಕಲ್ಲು ಮಳೆಯಾಗಿದೆ. ಜೋರು ಮಳೆ ಮತ್ತು ಗಾಳಿಯ ರಭಸಕ್ಕೆ ವಿವಿಧೆಡೆ ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>