ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ, ಆನಂದಪುರ, ರಿಪ್ಪನ್‌ಪೇಟೆಯಲ್ಲಿ ಜೋರು ಮಳೆ

Published 20 ಏಪ್ರಿಲ್ 2024, 16:14 IST
Last Updated 20 ಏಪ್ರಿಲ್ 2024, 16:14 IST
ಅಕ್ಷರ ಗಾತ್ರ

ಶಿವಮೊಗ್ಗ/ದಾವಣಗೆರೆ: ಶಿವಮೊಗ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶನಿವಾರ ಬೆಳಗಿನ ಜಾವ ಬಿರುಸಿನ ಮಳೆ ಸುರಿಯಿತು.

ಶುಕ್ರವಾರ ಸಂಜೆ ಶುರುವಾಗಿ ರಾತ್ರಿ ಬಿಡುವು ನೀಡಿದ್ದರೂ ಬೆಳಗಿನ ಜಾವ ಮತ್ತೆ ವರುಣ ಆರ್ಭಟಿಸಿದ. ಗುಡುಗು–ಸಿಡಿಲಿನ ಆರ್ಭಟವೂ ಜೋರಾಗಿತ್ತು. ಸಾಗರ ತಾಲ್ಲೂಕಿನ ಆನಂದಪುರ, ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಮಧ್ಯಾಹ್ನದವರೆಗೂ ಮೋಡ ಕವಿದ ವಾತಾವರಣ ಇದ್ದು, ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನರಿಗೆ ತಂಪು ವಾತಾವರಣ ಒಡಮೂಡಿ ಮಳೆಗಾಲದ ಅನುಭವವಾಯಿತು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಗುಡುಗು, ಮಿಂಚು ಸಿಡಿಲಿನ ಆರ್ಭಟದೊಂದಿಗೆ ಒಂದು ತಾಸಿಗಿಂತಲೂ ಹೆಚ್ಚು ಕಾಲ ಮಳೆ ಸುರಿಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT