<p>ಶಿವಮೊಗ್ಗ: ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ಶಿವಮೊಗ್ಗ ಜಿಲ್ಲೆಯದಾದ್ಯಂತ ಶನಿವಾರ ರಾತ್ರಿ ಹಾಗೂ ಭಾನುವಾರ ದಿನವಿಡೀ ಬಿಡುವಿಲ್ಲದೆ ಸುರಿಯಿತು. ಇದರಿಂದ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ಆಸ್ಪತ್ರೆ, ಹೊಲ ಗದ್ದೆಗಳಿಗೆ ಹೋಗಲು ಪರದಾಡಿದರು.</p>.<p>ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಶಿಕಾರಿಪುರ, ಭದ್ರಾವತಿ, ಸೊರಬ, ಶಿವಮೊಗ್ಗ ತಾಲ್ಲೂಕಿನಲ್ಲಿ ಜೋರು ಮಳೆಯಾಗಿದೆ.</p>.<p>ಭಾರಿ ಮಳೆಯಿಂದಾಗಿ ಶಿವಮೊಗ್ಗ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಉಂಟಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಚರಂಡಿಗಳನ್ನು ಬಂದ್ ಮಾಡಲಾಗಿದೆ. ಹಾಗಾಗಿ ನಗರದ ಕೆಲವು ಕಡೆ ರಸ್ತೆಯಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಇನ್ನು, ನಿರಂತರ ಮಳೆಯಿಂದಾಗಿ ಕೆಲವು ಕಡೆ ತೋಟ, ಗದ್ದೆಗಳಲ್ಲಿ ನೀರು ನಿಂತಿದೆ. ಇತ್ತೀಚೆಗೆ ಭತ್ತ, ಶುಂಠಿ, ಜೋಳದ ಬಿತ್ತನೆ ಮಾಡಲಾಗಿದೆ. ಈಗ ಗದ್ದೆಯಲ್ಲಿ ನೀರು ನಿಂತಿದ್ದು, ಬೆಳಹಾನಿಯಾಗುವ ಆತಂಕ ಎದುರಾಗಿದೆ.</p>.<p class="Subhead">ಧರೆಗುರುಳಿದ ಮರ: ಭಾನುವಾರ ಸುರಿದ ಭಾರಿ ಮಳೆಗೆ ಶಿವಮೊಗ್ಗ ನಗರದ ವಿನೋಬ ನಗರದ ಪೊಲೀಸ್ ಚೌಕಿ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಿದ್ದು, ಇದರಿಂದ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p class="Briefhead">ಜೋಗದ ಸಿರಿ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು</p>.<p>ಕಾರ್ಗಲ್: ಲಾಕ್ಡೌನ್ ತೆರವಾದ ಬೆನ್ನಲ್ಲೇ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರ ದಂಡು ಲಗ್ಗೆಯಿಟ್ಟಿದ್ದು, ಭಾನುವಾರ ಜೋಗಕ್ಕೆ ಜನಸಾಗರವೇ ಹರಿದುಬಂದಿದೆ.</p>.<p>ಭಾನುವಾರ 10 ಸಾವಿರ ಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದು, 1500ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಬಂದಿದ್ದರಿಂದ ಜೋಗ ನಿರ್ವಹಣಾ ಪ್ರಾಧಿಕಾರಕ್ಕೆ ಪ್ರವೇಶ ಶುಲ್ಕದ ಮೂಲಕ<br />₹ 1.67 ಲಕ್ಷ ಸಂಗ್ರಹವಾಗಿದೆ ಎಂದು ಪ್ರಾಧಿಕಾರದ ಮೂಲ ಗಳು ತಿಳಿಸಿವೆ. ಪ್ರವಾಸಿ ವಾಹನಗಳು ಎಲ್ಲೆಂದರಲ್ಲಿ ನಿಲುಗಡೆ ಮಾಡಿದ ಕಾರಣ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಕೊರೊನಾ ಮಾರ್ಗಸೂಚಿಗಳನ್ನು ಪ್ರವಾಸಿಗರು ಗಾಳಿಗೆ ತೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ಶಿವಮೊಗ್ಗ ಜಿಲ್ಲೆಯದಾದ್ಯಂತ ಶನಿವಾರ ರಾತ್ರಿ ಹಾಗೂ ಭಾನುವಾರ ದಿನವಿಡೀ ಬಿಡುವಿಲ್ಲದೆ ಸುರಿಯಿತು. ಇದರಿಂದ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ಆಸ್ಪತ್ರೆ, ಹೊಲ ಗದ್ದೆಗಳಿಗೆ ಹೋಗಲು ಪರದಾಡಿದರು.</p>.<p>ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಶಿಕಾರಿಪುರ, ಭದ್ರಾವತಿ, ಸೊರಬ, ಶಿವಮೊಗ್ಗ ತಾಲ್ಲೂಕಿನಲ್ಲಿ ಜೋರು ಮಳೆಯಾಗಿದೆ.</p>.<p>ಭಾರಿ ಮಳೆಯಿಂದಾಗಿ ಶಿವಮೊಗ್ಗ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಉಂಟಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಚರಂಡಿಗಳನ್ನು ಬಂದ್ ಮಾಡಲಾಗಿದೆ. ಹಾಗಾಗಿ ನಗರದ ಕೆಲವು ಕಡೆ ರಸ್ತೆಯಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಇನ್ನು, ನಿರಂತರ ಮಳೆಯಿಂದಾಗಿ ಕೆಲವು ಕಡೆ ತೋಟ, ಗದ್ದೆಗಳಲ್ಲಿ ನೀರು ನಿಂತಿದೆ. ಇತ್ತೀಚೆಗೆ ಭತ್ತ, ಶುಂಠಿ, ಜೋಳದ ಬಿತ್ತನೆ ಮಾಡಲಾಗಿದೆ. ಈಗ ಗದ್ದೆಯಲ್ಲಿ ನೀರು ನಿಂತಿದ್ದು, ಬೆಳಹಾನಿಯಾಗುವ ಆತಂಕ ಎದುರಾಗಿದೆ.</p>.<p class="Subhead">ಧರೆಗುರುಳಿದ ಮರ: ಭಾನುವಾರ ಸುರಿದ ಭಾರಿ ಮಳೆಗೆ ಶಿವಮೊಗ್ಗ ನಗರದ ವಿನೋಬ ನಗರದ ಪೊಲೀಸ್ ಚೌಕಿ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಿದ್ದು, ಇದರಿಂದ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p class="Briefhead">ಜೋಗದ ಸಿರಿ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು</p>.<p>ಕಾರ್ಗಲ್: ಲಾಕ್ಡೌನ್ ತೆರವಾದ ಬೆನ್ನಲ್ಲೇ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರ ದಂಡು ಲಗ್ಗೆಯಿಟ್ಟಿದ್ದು, ಭಾನುವಾರ ಜೋಗಕ್ಕೆ ಜನಸಾಗರವೇ ಹರಿದುಬಂದಿದೆ.</p>.<p>ಭಾನುವಾರ 10 ಸಾವಿರ ಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದು, 1500ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಬಂದಿದ್ದರಿಂದ ಜೋಗ ನಿರ್ವಹಣಾ ಪ್ರಾಧಿಕಾರಕ್ಕೆ ಪ್ರವೇಶ ಶುಲ್ಕದ ಮೂಲಕ<br />₹ 1.67 ಲಕ್ಷ ಸಂಗ್ರಹವಾಗಿದೆ ಎಂದು ಪ್ರಾಧಿಕಾರದ ಮೂಲ ಗಳು ತಿಳಿಸಿವೆ. ಪ್ರವಾಸಿ ವಾಹನಗಳು ಎಲ್ಲೆಂದರಲ್ಲಿ ನಿಲುಗಡೆ ಮಾಡಿದ ಕಾರಣ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಕೊರೊನಾ ಮಾರ್ಗಸೂಚಿಗಳನ್ನು ಪ್ರವಾಸಿಗರು ಗಾಳಿಗೆ ತೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>