<p><strong>ತೀರ್ಥಹಳ್ಳಿ: </strong>ಅಕಾಲಿಕ ಮಳೆಯಿಂದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾರ್ಮಿಕರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.</p>.<p>ಮೇಲಿನ ತೂದೂರಿನ ಶಂಕರಪ್ಪ (52) ಮೃತ ವ್ಯಕ್ತಿ. ಮಳೆಯಿಂದಾದ ಅನಾಹುತ ತಡೆಯಲು ಕೃಷಿ ಭೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮನೆಗೆ ತೆರಳುವ ಧಾವಂತದಲ್ಲಿದ್ದ ಶಂಕರಪ್ಪ ಗದ್ದೆ ಅಂಚಿನಿಂದ ಕಾಲು ಜಾರಿ ಹಳ್ಳಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಕೃಷಿ ಜಮೀನಿನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಶಂಕರಪ್ಪ ಕುಟುಂಬದ ಆಧಾರ ಸ್ತಂಭವಾಗಿದ್ದರು. ಅವರಿಗೆ ಪತ್ನಿ, 8ನೇ ತರಗತಿ ಓದುತ್ತಿರುವ ಪುತ್ರ ಇದ್ದಾರೆ.</p>.<p>ಘಟನಾ ಸ್ಥಳಕ್ಕೆ ತಹಶೀಲ್ದಾರ್ ಡಾ.ಶ್ರೀಪಾದ್, ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್ ಹೆಗ್ಡೆ, ರಾಜಸ್ವ ನಿರೀಕ್ಷಕ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿಪರಿಶೀಲಿಸಿದರು. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ: </strong>ಅಕಾಲಿಕ ಮಳೆಯಿಂದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾರ್ಮಿಕರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.</p>.<p>ಮೇಲಿನ ತೂದೂರಿನ ಶಂಕರಪ್ಪ (52) ಮೃತ ವ್ಯಕ್ತಿ. ಮಳೆಯಿಂದಾದ ಅನಾಹುತ ತಡೆಯಲು ಕೃಷಿ ಭೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮನೆಗೆ ತೆರಳುವ ಧಾವಂತದಲ್ಲಿದ್ದ ಶಂಕರಪ್ಪ ಗದ್ದೆ ಅಂಚಿನಿಂದ ಕಾಲು ಜಾರಿ ಹಳ್ಳಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಕೃಷಿ ಜಮೀನಿನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಶಂಕರಪ್ಪ ಕುಟುಂಬದ ಆಧಾರ ಸ್ತಂಭವಾಗಿದ್ದರು. ಅವರಿಗೆ ಪತ್ನಿ, 8ನೇ ತರಗತಿ ಓದುತ್ತಿರುವ ಪುತ್ರ ಇದ್ದಾರೆ.</p>.<p>ಘಟನಾ ಸ್ಥಳಕ್ಕೆ ತಹಶೀಲ್ದಾರ್ ಡಾ.ಶ್ರೀಪಾದ್, ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್ ಹೆಗ್ಡೆ, ರಾಜಸ್ವ ನಿರೀಕ್ಷಕ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿಪರಿಶೀಲಿಸಿದರು. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>