<p><strong>ಶಿವಮೊಗ್ಗ</strong>: ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಭರ್ಜರಿ ಮಳೆಯಾಗಿದೆ. ಜಿಲ್ಲೆಯ ವಾಡಿಕೆ ಮಳೆ 33.66 ಸೆಂ.ಮೀ ಇದ್ದರೂ, ಈ ಬಾರಿ 42.86 ಸೆಂ.ಮೀ ಮಳೆಯಾಗಿದೆ. ಹೀಗಾಗಿ ಮಲೆನಾಡಿನಲ್ಲಿ ಭದ್ರಾ, ಮಾಣಿ, ಲಿಂಗನಮಕ್ಕಿ ಸೇರಿದಂತೆ ಜಲಾಶಯಗಳ ನೀರಿನಮಟ್ಟ ದಾಖಲೆಯ ಏರಿಕೆಯಾಗಿದೆ.</p>.<p>ಜೊತೆಗೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಮೆಕ್ಕೆಜೋಳ (ಮುಸುಕಿನ ಜೋಳ) ಬಿತ್ತನೆಗೆ ರೈತರು ಉಳುಮೆ ಆರಂಭಿಸಿದ್ದು, ಭತ್ತದ ನಾಟಿಗೆ ಬೀಜ ಚೆಲ್ಲಲು ಅಣಿ ಮಾಡಿಕೊಂಡಿದ್ದಾರೆ.</p>.<p><strong>ಭತ್ತ, ಮುಸುಕಿನ ಜೋಳಕ್ಕೆ ವಿಮೆ: </strong></p>.<p>ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರು ಕೇವಲ ಶೇ 2ರಷ್ಟು ಪ್ರೀಮಿಯಂ ಮೊತ್ತ ಪಾವತಿಸಿ ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಟಿ.ರಮೇಶ್ ತಿಳಿಸಿದ್ದಾರೆ.</p>.<p>ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ರೈತರನ್ನು ಆರ್ಥಿಕ ನಷ್ಟದಿಂದ ಹೊರತರಲು ಈ ಯೋಜನೆ ಉಪಯುಕ್ತವಾಗಿದೆ. ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಲು ಮುಸುಕಿನ ಜೋಳಕ್ಕೆ ಜುಲೈ 31 ಕೊನೆಯ ದಿನಾಂಕ. ಭತ್ತದ ಬೆಳೆಗೆ ಆಗಸ್ಟ್ 16 ಕೊನೆಯ ದಿನವಾಗಿದೆ. ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಕರ್ನಾಟಕ-ಒನ್, ಗ್ರಾಮ-ಒನ್ ಕೇಂದ್ರ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿಸಬಹುದು. </p>.<p>ರೈತರು ತಾವು ಬೆಳದ ಬೆಳೆಯನ್ನು ಮೊಬೈಲ್ ಫೋನ್ ಆ್ಯಪ್ ಮೂಲಕ ಸಮೀಕ್ಷೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ತೊಡಕು ಉಂಟಾದಾಗ ರೈತರು ಗೂಗಲ್ ಪ್ಲೇಸ್ಟೋರ್ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ-2025 (Farmer Crop Survey App-2025) ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿವರ ದಾಖಲಿಸಬಹುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಭರ್ಜರಿ ಮಳೆಯಾಗಿದೆ. ಜಿಲ್ಲೆಯ ವಾಡಿಕೆ ಮಳೆ 33.66 ಸೆಂ.ಮೀ ಇದ್ದರೂ, ಈ ಬಾರಿ 42.86 ಸೆಂ.ಮೀ ಮಳೆಯಾಗಿದೆ. ಹೀಗಾಗಿ ಮಲೆನಾಡಿನಲ್ಲಿ ಭದ್ರಾ, ಮಾಣಿ, ಲಿಂಗನಮಕ್ಕಿ ಸೇರಿದಂತೆ ಜಲಾಶಯಗಳ ನೀರಿನಮಟ್ಟ ದಾಖಲೆಯ ಏರಿಕೆಯಾಗಿದೆ.</p>.<p>ಜೊತೆಗೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಮೆಕ್ಕೆಜೋಳ (ಮುಸುಕಿನ ಜೋಳ) ಬಿತ್ತನೆಗೆ ರೈತರು ಉಳುಮೆ ಆರಂಭಿಸಿದ್ದು, ಭತ್ತದ ನಾಟಿಗೆ ಬೀಜ ಚೆಲ್ಲಲು ಅಣಿ ಮಾಡಿಕೊಂಡಿದ್ದಾರೆ.</p>.<p><strong>ಭತ್ತ, ಮುಸುಕಿನ ಜೋಳಕ್ಕೆ ವಿಮೆ: </strong></p>.<p>ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರು ಕೇವಲ ಶೇ 2ರಷ್ಟು ಪ್ರೀಮಿಯಂ ಮೊತ್ತ ಪಾವತಿಸಿ ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಟಿ.ರಮೇಶ್ ತಿಳಿಸಿದ್ದಾರೆ.</p>.<p>ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ರೈತರನ್ನು ಆರ್ಥಿಕ ನಷ್ಟದಿಂದ ಹೊರತರಲು ಈ ಯೋಜನೆ ಉಪಯುಕ್ತವಾಗಿದೆ. ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಲು ಮುಸುಕಿನ ಜೋಳಕ್ಕೆ ಜುಲೈ 31 ಕೊನೆಯ ದಿನಾಂಕ. ಭತ್ತದ ಬೆಳೆಗೆ ಆಗಸ್ಟ್ 16 ಕೊನೆಯ ದಿನವಾಗಿದೆ. ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಕರ್ನಾಟಕ-ಒನ್, ಗ್ರಾಮ-ಒನ್ ಕೇಂದ್ರ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿಸಬಹುದು. </p>.<p>ರೈತರು ತಾವು ಬೆಳದ ಬೆಳೆಯನ್ನು ಮೊಬೈಲ್ ಫೋನ್ ಆ್ಯಪ್ ಮೂಲಕ ಸಮೀಕ್ಷೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ತೊಡಕು ಉಂಟಾದಾಗ ರೈತರು ಗೂಗಲ್ ಪ್ಲೇಸ್ಟೋರ್ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ-2025 (Farmer Crop Survey App-2025) ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿವರ ದಾಖಲಿಸಬಹುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>