ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಕೆಲಸ ನಡೆಯುತ್ತಿದ್ದು, ಮಳೆ ಕಾರಣ ರಸ್ತೆಗಳೆಲ್ಲ ಕೆಸರು ಗದ್ದೆಗಳಾಗಿವೆ. ನೀರು ತುಂಬಿದ ಗುಂಡಿಗಳ ಅರಿವಿಲ್ಲದೆ ಹಲವು ವಾಹನಗಳು ಅಪಘಾತಕ್ಕೆ ಒಳಗಾಗಿವೆ. ಕೆಲವರು ಗಾಯಗೊಂಡಿದ್ದಾರೆ. ನದಿ ನೀರಿನ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ, ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.