ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ತೀರ್ಥಹಳ್ಳಿ– ಉಡುಪಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಆಗುಂಬೆ ಘಾಟಿಯ ರಸ್ತೆಯ ಇಕ್ಕೆಲಗಳಲ್ಲಿ ಭಾರಿ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ತೊಂದರೆಯುಂಟಾಗುತ್ತಿದೆ.
ಆದ್ದರಿಂದ ಈ ಮಾರ್ಗದಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅ. 15 ರವರೆಗೆ ಶಿವಮೊಗ್ಗ– ತೀರ್ಥಹಳ್ಳಿ– ಉಂಟೂರುಕಟ್ಟೆ ಕೈಮರ– ಮಾಸ್ತಿಕಟ್ಟೆ–ಹುಲಿಕಲ್–ಕುಂದಾಪುರ ಹಾಗೂ ಶಿವಮೊಗ್ಗ– ತೀರ್ಥಹಳ್ಳಿ– ಕಮ್ಮರಡಿ– ಶೃಂಗೇರಿ– ಕೆರೆಕಟ್ಟೆ– ಕಾರ್ಕಳ ಮಾರ್ಗ ವಾಗಿ ಸಂಚರಿಸುವಂತೆ ತಿಳಿಸಿದ್ದಾರೆ.