<p><strong>ಸಾಗರ</strong>: ‘ಅಂಗವಿಕಲರ ಬಗ್ಗೆ ಕೇವಲ ಅನುಕಂಪ ತೋರಿಸುವುದರಿಂದ ಪ್ರಯೋಜನವಿಲ್ಲ. ಬದಲಾಗಿ ಅವರಿಗೆ ಸಕಾಲದಲ್ಲಿ ಅಗತ್ಯ ನೆರವು ನೀಡುವುದು ಮುಖ್ಯ’ ಎಂದು ಕೆಪಿಸಿಸಿ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಹೇಳಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿ ಹಾಗೂ ಸಾಧನಾ ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ನಂತರ ಕಾರ್ಮಿಕರಿಗೆ ಉಪಯುಕ್ತವಾಗುವ ಹಲವು ಹೊಸ ಯೋಜನೆಗಳನ್ನು ರೂಪಿಸಿದ್ದಾರೆ. ಬೇರೆ ಬೇರೆ ಕ್ಷೇತ್ರದವರನ್ನು ಕಾರ್ಮಿಕ ವಲಯಕ್ಕೆ ತರುವ ಮೂಲಕ ಈ ಕ್ಷೇತ್ರವನ್ನು ವಿಸ್ತರಿಸುವ ಕಾರ್ಯಕ್ಕೆ ಅವರು ಮುಂದಾಗಿದ್ದಾರೆ’ ಎಂದು ತಿಳಿಸಿದರು.</p>.<p>ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ದೊರಕುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳಿಗೆ ಪ್ರಯೋಜನ ದೊರಕುವಂತೆ ಜಾಗೃತಿ ಮೂಡಿಸುವ ಕೆಲಸವನ್ನು ನಮ್ಮ ಸಂಘಟನೆ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಎನ್.ರವೀಂದ್ರ ಸಾಗರ್ ಹೇಳಿದರು.</p>.<p>ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಆರ್ಥರ್ ಗೋಮ್ಸ್, ಕನ್ನಪ್ಪ, ಹರೀಶ್, ರೇಖಾ, ವಾಣಿ, ಗ್ರೇಸಿ ಡಯಾಸ್,ಡಿ. ದಿನೇಶ್, ವಿಜಯಕುಮಾರ್, ಪ್ರವೀಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ಅಂಗವಿಕಲರ ಬಗ್ಗೆ ಕೇವಲ ಅನುಕಂಪ ತೋರಿಸುವುದರಿಂದ ಪ್ರಯೋಜನವಿಲ್ಲ. ಬದಲಾಗಿ ಅವರಿಗೆ ಸಕಾಲದಲ್ಲಿ ಅಗತ್ಯ ನೆರವು ನೀಡುವುದು ಮುಖ್ಯ’ ಎಂದು ಕೆಪಿಸಿಸಿ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಹೇಳಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿ ಹಾಗೂ ಸಾಧನಾ ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ನಂತರ ಕಾರ್ಮಿಕರಿಗೆ ಉಪಯುಕ್ತವಾಗುವ ಹಲವು ಹೊಸ ಯೋಜನೆಗಳನ್ನು ರೂಪಿಸಿದ್ದಾರೆ. ಬೇರೆ ಬೇರೆ ಕ್ಷೇತ್ರದವರನ್ನು ಕಾರ್ಮಿಕ ವಲಯಕ್ಕೆ ತರುವ ಮೂಲಕ ಈ ಕ್ಷೇತ್ರವನ್ನು ವಿಸ್ತರಿಸುವ ಕಾರ್ಯಕ್ಕೆ ಅವರು ಮುಂದಾಗಿದ್ದಾರೆ’ ಎಂದು ತಿಳಿಸಿದರು.</p>.<p>ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ದೊರಕುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳಿಗೆ ಪ್ರಯೋಜನ ದೊರಕುವಂತೆ ಜಾಗೃತಿ ಮೂಡಿಸುವ ಕೆಲಸವನ್ನು ನಮ್ಮ ಸಂಘಟನೆ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಎನ್.ರವೀಂದ್ರ ಸಾಗರ್ ಹೇಳಿದರು.</p>.<p>ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಆರ್ಥರ್ ಗೋಮ್ಸ್, ಕನ್ನಪ್ಪ, ಹರೀಶ್, ರೇಖಾ, ವಾಣಿ, ಗ್ರೇಸಿ ಡಯಾಸ್,ಡಿ. ದಿನೇಶ್, ವಿಜಯಕುಮಾರ್, ಪ್ರವೀಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>