ಶಿವಮೊಗ್ಗ ನಗರದಲ್ಲಿ ಅವೈಜ್ಞಾನಿಕವಾಗಿ ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದೆ. ಒಕ್ಕೂಟ ಹಲವು ಪ್ರತಿಭಟನೆಗಳ ಮೂಲಕ ಕಾನೂನಾತ್ಮಕ ಹೋರಾಟಕ್ಕೂ ಸಜ್ಜಾಗಿ ಹೈಕೋರ್ಟ್ ಗೆ ದಾವೆ ಹೂಡಿದೆ. ಈಗ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ ಆಸ್ತಿ ತೆರಿಗೆಯನ್ನು ಪಾವತಿಸಬೇಕು. ಆದರೆ, ಈ ದಾವೆಯಲ್ಲಿ ಯಶಸ್ವಿಯಾದರೆ ಪಾವತಿಸಿರುವ ಹೆಚ್ಚುವರಿ ಹಣವನ್ನು ಶೇ 12 ರ ಬಡ್ಡಿಯೊಂದಿಗೆ ಪಾಲಿಕೆ ಹಿಂದಿರುಗಿಸಬೇಕು ಎಂದು ಸೂಚನೆ ನೀಡಿದೆ. ತೆರಿಗೆ ವಿರುದ್ಧ ಕಾನೂನು ಸಮರದಲ್ಲಿ ಇದೊಂದು ಯಶಸ್ಸು ಎಂದೇ ವೇದಿಕೆ ಭಾವಿಸುತ್ತಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.