ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ಸಿಟಿ ಕಾಮಗಾರಿಗಳು ಮುಗಿಯಲು ಎಷ್ಟು ದಿನಗಳು ಬೇಕಿದೆ. ಅವೈಜ್ಞಾನಿಕವಾಗಿ ಯೋಜನೆ ರೂಪಿಸಲಾಗಿದೆ. ಪಾದಚಾರಿ ಮಾರ್ಗಗಳನ್ನು ದೊಡ್ಡದಾಗಿ ವಿಸ್ತರಿಸಲಾಗಿದೆ. ರಸ್ತೆಗಳು ಕಿರಿದಾಗಿವೆ. ದೊಡ್ಡದಾದ ಫುಟ್ಪಾತ್ಗಳನ್ನು ವ್ಯಾಪಾರಸ್ಥರು, ಬೀದಿ ಬದಿ ತಿಂಡಿ ವ್ಯಾಪಾರಿಗಳು, ಹೋಟೆಲ್, ವಾಣಿಜ್ಯ ಮಳಿಗೆಗಳ ಮಾಲೀಕರು ಅತಿಕ್ರಮಿಸಿಕೊಳ್ಳುತ್ತಿದ್ದಾರೆ. ಹೊಸದಾಗಿ ನಿರ್ಮಾಣವಾಗಿರುವ ಫುಟ್ಪಾತ್ಗಳನ್ನು ತಮ್ಮ ಸ್ವತ್ತುಗಳೆಂದು ಭಾವಿಸಿಕೊಂಡಿದ್ದಾರೆ. ಪಾದಚಾರಿಗಳು ಓಡಾಡಲು ಅವಕಾಶವೇ ಇಲ್ಲ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.