ಹೊಳೆಹೊನ್ನೂರು, ಎಮ್ಮೆಹಟ್ಟಿ, ಅಗಸನಹಳ್ಳಿ, ಕೂಡ್ಲಿ, ಡಣಾಯಪುರ, ಸಿದ್ಲೀಪುರ, ದಾಸರಕಲ್ಲಹಳ್ಳಿಯಲ್ಲಿ ಸಾಧಾರಣ ವರ್ಷಧಾರೆಯಾಗಿದೆ.
ಹನುಮಂತಾಪುರ ಗ್ರಾಮದಲ್ಲಿ ಮಳೆಗೆ ಚರಂಡಿ ಕಟ್ಟಿಕೊಂಡು ರಸ್ತೆಗೆ ನೀರು ಹರಿಯಿತು. ಮನೆಗಳಿಗೆ ನೀರು ನುಗ್ಗಿದೆ.
ಮೂರ್ನಾಲ್ಕು ದಿನಗಳಿಂದ ಮೋಡ ಆವರಿಸುತ್ತಿದ್ದು, ಮಳೆ ಬಂದಿರಲಿಲ್ಲ. ಇದರಿಂದ ಕಂಗಾಲಾಗಿದ್ದ ರೈತರು ಪ್ರತಿ ದಿನ ಮಳೆಗಾಗಿ ಪ್ರಾರ್ಥಿಸುತ್ತಿದ್ದರು. ಗುರುವಾರ ಮಳೆ ಬೀಳಲು ಆರಂಭಿಸಿದ ಕೂಡಲೇ ಸಂತಸಗೊಂಡ ರೈತರು ವರುಣ ದೇವನಿಗೆ ಕೈ ಮುಗಿದು ಸ್ವಾಗತಿಸಿದರು.
ಕಳೆದ ವಾರ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದ್ದು, ಗುರುವಾರ ಮಳೆ ಸುರಿದ್ದರಿಂದ ಅಡಿಕೆ ತೋಟಗಳಿಗೆ ಅನುಕೂಲವಾಗಿದೆ. ಕೆಲವು ರೈತರು ಪಂಪ್ಸೆಟ್ ಗಳ ಮೂಲಕ ತೋಟಗಳಿಗೆ ನೀರು ಹರಿಸುತ್ತಿದ್ದು, ರಾತ್ರಿ ಪಾಳಿಯಲ್ಲಿ 3 ಪೇಸ್ ವಿದ್ಯುತ್ ನೀಡುತ್ತಿದ್ದರಿಂದ ರೈತರು ಹೈರಾಣರಾಗಿದ್ದಾರೆ. ಮಳೆಯಿಂದ ರೈತರು ಕೊಂಚ ನಿಟ್ಟುಸಿರುಬಿಟ್ಟರು.
ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ಮಳೆಗೆ ಚರಂಡಿಯೊಂದು ಕಟ್ಟಿಕೊಂಡು ರಸ್ತೆಯಲ್ಲಿ ನೀರು ಹರಿಯುತ್ತಿರುವುದು