<p>ಹೊಳೆಹೊನ್ನೂರು: ಹೋಬಳಿಯ ಕೆಲವು ಗ್ರಾಮಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಆರಂಭವಾದ ಮಳೆ ಭಾರಿ ಗಾಳಿ, ಸಿಡಿಲು, ಗುಡುಗು ಸಹಿತ ಒಂದು ಗಂಟೆ ಸುರಿಯಿತು.</p>.<p>ಆನವೇರಿ, ಮೈದೊಳಲು, ಮಂಗೋಟೆ, ಮಲ್ಲಾಪುರ, ಸನ್ಯಾಸಿಕೋಡಮಗ್ಗಿ, ಯಡೇಹಳ್ಳಿ, ಅಶೋಕನ ನಗರ, ಅಗರದಹಳ್ಳಿ, ಚಂದನಕೆರೆ, ಕಲ್ಲಿಹಾಳ್, ಡಿ.ಬಿ.ಹಳ್ಳಿ, ಅರಹತೊಳಲು, ಅರಕೆರೆ, ಅರಬಿಳಚಿ, ವಿಠಲಾಪುರ, ಜಂಭರಘಟ್ಟೆ, ಕೆರೆಬೀರನ ಹಳ್ಳಿ, ಹನುಮಂತಾಪುರದಲ್ಲಿ ಉತ್ತಮ ಮಳೆಯಾಗಿದೆ.</p>.<p>ಹೊಳೆಹೊನ್ನೂರು, ಎಮ್ಮೆಹಟ್ಟಿ, ಅಗಸನಹಳ್ಳಿ, ಕೂಡ್ಲಿ, ಡಣಾಯಪುರ, ಸಿದ್ಲೀಪುರ, ದಾಸರಕಲ್ಲಹಳ್ಳಿಯಲ್ಲಿ ಸಾಧಾರಣ ವರ್ಷಧಾರೆಯಾಗಿದೆ.</p>.<p>ಹನುಮಂತಾಪುರ ಗ್ರಾಮದಲ್ಲಿ ಮಳೆಗೆ ಚರಂಡಿ ಕಟ್ಟಿಕೊಂಡು ರಸ್ತೆಗೆ ನೀರು ಹರಿಯಿತು. ಮನೆಗಳಿಗೆ ನೀರು ನುಗ್ಗಿದೆ. </p>.<p>ಮೂರ್ನಾಲ್ಕು ದಿನಗಳಿಂದ ಮೋಡ ಆವರಿಸುತ್ತಿದ್ದು, ಮಳೆ ಬಂದಿರಲಿಲ್ಲ. ಇದರಿಂದ ಕಂಗಾಲಾಗಿದ್ದ ರೈತರು ಪ್ರತಿ ದಿನ ಮಳೆಗಾಗಿ ಪ್ರಾರ್ಥಿಸುತ್ತಿದ್ದರು. ಗುರುವಾರ ಮಳೆ ಬೀಳಲು ಆರಂಭಿಸಿದ ಕೂಡಲೇ ಸಂತಸಗೊಂಡ ರೈತರು ವರುಣ ದೇವನಿಗೆ ಕೈ ಮುಗಿದು ಸ್ವಾಗತಿಸಿದರು.</p>.<p>ಕಳೆದ ವಾರ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದ್ದು, ಗುರುವಾರ ಮಳೆ ಸುರಿದ್ದರಿಂದ ಅಡಿಕೆ ತೋಟಗಳಿಗೆ ಅನುಕೂಲವಾಗಿದೆ. ಕೆಲವು ರೈತರು ಪಂಪ್ಸೆಟ್ ಗಳ ಮೂಲಕ ತೋಟಗಳಿಗೆ ನೀರು ಹರಿಸುತ್ತಿದ್ದು, ರಾತ್ರಿ ಪಾಳಿಯಲ್ಲಿ 3 ಪೇಸ್ ವಿದ್ಯುತ್ ನೀಡುತ್ತಿದ್ದರಿಂದ ರೈತರು ಹೈರಾಣರಾಗಿದ್ದಾರೆ. ಮಳೆಯಿಂದ ರೈತರು ಕೊಂಚ ನಿಟ್ಟುಸಿರುಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆಹೊನ್ನೂರು: ಹೋಬಳಿಯ ಕೆಲವು ಗ್ರಾಮಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಆರಂಭವಾದ ಮಳೆ ಭಾರಿ ಗಾಳಿ, ಸಿಡಿಲು, ಗುಡುಗು ಸಹಿತ ಒಂದು ಗಂಟೆ ಸುರಿಯಿತು.</p>.<p>ಆನವೇರಿ, ಮೈದೊಳಲು, ಮಂಗೋಟೆ, ಮಲ್ಲಾಪುರ, ಸನ್ಯಾಸಿಕೋಡಮಗ್ಗಿ, ಯಡೇಹಳ್ಳಿ, ಅಶೋಕನ ನಗರ, ಅಗರದಹಳ್ಳಿ, ಚಂದನಕೆರೆ, ಕಲ್ಲಿಹಾಳ್, ಡಿ.ಬಿ.ಹಳ್ಳಿ, ಅರಹತೊಳಲು, ಅರಕೆರೆ, ಅರಬಿಳಚಿ, ವಿಠಲಾಪುರ, ಜಂಭರಘಟ್ಟೆ, ಕೆರೆಬೀರನ ಹಳ್ಳಿ, ಹನುಮಂತಾಪುರದಲ್ಲಿ ಉತ್ತಮ ಮಳೆಯಾಗಿದೆ.</p>.<p>ಹೊಳೆಹೊನ್ನೂರು, ಎಮ್ಮೆಹಟ್ಟಿ, ಅಗಸನಹಳ್ಳಿ, ಕೂಡ್ಲಿ, ಡಣಾಯಪುರ, ಸಿದ್ಲೀಪುರ, ದಾಸರಕಲ್ಲಹಳ್ಳಿಯಲ್ಲಿ ಸಾಧಾರಣ ವರ್ಷಧಾರೆಯಾಗಿದೆ.</p>.<p>ಹನುಮಂತಾಪುರ ಗ್ರಾಮದಲ್ಲಿ ಮಳೆಗೆ ಚರಂಡಿ ಕಟ್ಟಿಕೊಂಡು ರಸ್ತೆಗೆ ನೀರು ಹರಿಯಿತು. ಮನೆಗಳಿಗೆ ನೀರು ನುಗ್ಗಿದೆ. </p>.<p>ಮೂರ್ನಾಲ್ಕು ದಿನಗಳಿಂದ ಮೋಡ ಆವರಿಸುತ್ತಿದ್ದು, ಮಳೆ ಬಂದಿರಲಿಲ್ಲ. ಇದರಿಂದ ಕಂಗಾಲಾಗಿದ್ದ ರೈತರು ಪ್ರತಿ ದಿನ ಮಳೆಗಾಗಿ ಪ್ರಾರ್ಥಿಸುತ್ತಿದ್ದರು. ಗುರುವಾರ ಮಳೆ ಬೀಳಲು ಆರಂಭಿಸಿದ ಕೂಡಲೇ ಸಂತಸಗೊಂಡ ರೈತರು ವರುಣ ದೇವನಿಗೆ ಕೈ ಮುಗಿದು ಸ್ವಾಗತಿಸಿದರು.</p>.<p>ಕಳೆದ ವಾರ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದ್ದು, ಗುರುವಾರ ಮಳೆ ಸುರಿದ್ದರಿಂದ ಅಡಿಕೆ ತೋಟಗಳಿಗೆ ಅನುಕೂಲವಾಗಿದೆ. ಕೆಲವು ರೈತರು ಪಂಪ್ಸೆಟ್ ಗಳ ಮೂಲಕ ತೋಟಗಳಿಗೆ ನೀರು ಹರಿಸುತ್ತಿದ್ದು, ರಾತ್ರಿ ಪಾಳಿಯಲ್ಲಿ 3 ಪೇಸ್ ವಿದ್ಯುತ್ ನೀಡುತ್ತಿದ್ದರಿಂದ ರೈತರು ಹೈರಾಣರಾಗಿದ್ದಾರೆ. ಮಳೆಯಿಂದ ರೈತರು ಕೊಂಚ ನಿಟ್ಟುಸಿರುಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>